30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಯುವ ಬಂಟರ ಹಾಗೂ ಮಹಿಳಾ ಬಂಟರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವವು ಎ.27 ರಂದು ಗುರುವಾಯನಕೆರೆಯ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಜರುಗಲಿದೆ.

ಈ ಕ್ರೀಡೋತ್ಸವದಲ್ಲಿ ಪಥಸಂಚಲನವು ವಿಶೇಷ ಆಕರ್ಷಣೆಯಾಗಿದ್ದು, ಬೆಳಿಗ್ಗೆ 9 ಗಂಟೆಗೆ ನವಶಕ್ತಿ ಕ್ರೀಡಾಂಗಣದಲ್ಲಿ 9 ವಲಯಗಳ ಕ್ರೀಡಾಳುಗಳು ಮತ್ತು ಬಂಟ ಸಮುದಾಯದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿಸ್ತುಬದ್ಧ ಮತ್ತು ಆಕರ್ಶಕವಾಗಿ ಪಥ ಸಂಚಲನ ನಡೆಸಿಕೊಟ್ಟ ತಂಡಗಳಿಗೆ ಹಾಗೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಥ ಸಂಚಲನದಲ್ಲಿ ಪಾಲ್ಗೊಂಡ ವಲಯಗಳಿಗೆ ಬಹುಮಾನ ನೀಡಲಾಗುತ್ತದೆ. ಕ್ರೀಡೋತ್ಸವದಲ್ಲಿ 6 ವರ್ಷದ ಒಳಗಿನ ಬಾಲಕ/ಬಾಲಕಿಯರಿಗೆ 50 ಮೀ ಓಟ, ಚೆಂಡು ಎಸೆತ, ಕಪ್ಪೆ ಜಿಗಿತ, 12 ವರ್ಗದ ಒಳಗಿನ ಬಾಲಕ/ಬಾಲಕಿಯರಿಗೆ 80 ಮೀ ಓಟ, ಚೆಂಡು ಎಸೆತ, ಲಿಂಬೆ ಚಮಚ, 17 ವರ್ಷದ ಒಳಗಿನ ಬಾಲಕ / ಬಾಲಕಿಯರಿಗೆ 100, 200, 40 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (18 ರಿಂದ 40 ವರ್ಷ) 100ಮೀ ಓಟ, 200ಮೀ ಓಟ, ಗುಂಡೆಸೆತ, 60 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (41ರಿಂದ 60ವರ್ಷ) 100ಮೀ ಓಟ, 200ಮೀ ವೇಗದ ನಡಿಗೆ, ಗುಂಡೆಸೆತ, 60 ವರ್ಷ ಮೇಲ್ಪಟ್ಟ ಹಿರಿಯರಿಗೆ (ಪುರುಷರು/ ಮಹಿಳೆಯರು): 100 ಮೀ ವೇಗದ ನಡಿಗೆ, ಗುಂಡೆಸೆತ, ಪುರುಷರಿಗೆ ವಾಲಿಬಾಲ್ (6+1), ಮಹಿಳೆಯರಿಗೆ ತ್ರೋಬಾಲ್ (9+1), ಹಗ್ಗ ಜಗ್ಗಾಟ (9+2) ಇರುವುದು. ವಿಜೇತರಿಗೆ ದೇವು ಪೂಂಜ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಬಂಟರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ಉಜಿರೆ: ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಹಾಸನ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಭೇಟಿ

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಎಚ್.ಒ ಭೇಟಿ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya
error: Content is protected !!