June 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

ಸುಲ್ಕೇರಿ: ಸುಲ್ಕೇರಿ ನರ್ಸರಿ ಬಳಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ ಹೊಡೆದು ಟಾಟಾ ಗೂಡ್ಸ್ ವಾಹನ ಚಾಲಕನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಎ.24 ರಂದು ರಾತ್ರಿ ನಡೆದಿದೆ.

ಎ.24 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಸುಲ್ಕೇರಿ ಗ್ರಾಮದ ಸುಲ್ಕೇರಿ ನರ್ಸರಿ ಬಳಿ ಗುರುವಾಯನಕೆರೆ – ನಾರಾವಿ – ಕಾರ್ಕಳ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಗುರುವಾಯನಕೆರೆ ಕಡೆಯಿಂದ ಈಚರ್ ಲಾರಿಯ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೇಲೆ ರಸ್ತೆಯ ಬಲಬದಿಗೆ ಚಲಾಯಿಸಿ ನಾರಾವಿ ಕಡೆಯಿಂದ ಗಣೇಶ್ ಗೌಡ ರವರು ಚಲಾಯಿಸಿಕೊಂಡು ಬರುತ್ತಿದ್ದ ಟಾಟಾ 407 ಗೂಡ್ಸ್ ವಾಹನ ಕ್ಕೆ ಬಲಬದಿ ಚಾಲಕನ ಡೋರ್‌ ಬಳಿಗೆ ರಭಸದಿಂದ ಡಿಕ್ಕಿ ಹೊಡೆದು ಅಪಘಾತ ಉಂಟುಮಾಡಿ ಬಳಿಕ ಈಚರ್ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದು, ಅಪಘಾತದಿಂದ ಗಣೇಶ್ ಗೌಡ ರವರ ವಾಹನ ಜಖಂಗೊಂಡಿದ್ದು, ಗಣೇಶ್ ಗೌಡ ರವರ ಸೊಂಟಕ್ಕೆ, ಬಲಕಾಲಿಗೆ ಗುದ್ದಿದ ಗಾಯಗಳಾಗಿ ಉಜಿರೆ ಬೆನಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ತರಬೇತಿ ಮೇಲ್ವಿಚಾರಕರಿಂದ ಶ್ರಮ ವಿನಿಮಯ ಮಾಡುತ್ತಿರುವ ಮಾಯ ಕಾರ್ಯಕ್ಷೇತ್ರದ ಎಂಜಿರಿಗಿ ಸಂಘದ ಬೇಟಿ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya
error: Content is protected !!