April 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

ಸುಲ್ಕೇರಿ: ಸುಲ್ಕೇರಿ ನರ್ಸರಿ ಬಳಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ ಹೊಡೆದು ಟಾಟಾ ಗೂಡ್ಸ್ ವಾಹನ ಚಾಲಕನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಎ.24 ರಂದು ರಾತ್ರಿ ನಡೆದಿದೆ.

ಎ.24 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಸುಲ್ಕೇರಿ ಗ್ರಾಮದ ಸುಲ್ಕೇರಿ ನರ್ಸರಿ ಬಳಿ ಗುರುವಾಯನಕೆರೆ – ನಾರಾವಿ – ಕಾರ್ಕಳ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಗುರುವಾಯನಕೆರೆ ಕಡೆಯಿಂದ ಈಚರ್ ಲಾರಿಯ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೇಲೆ ರಸ್ತೆಯ ಬಲಬದಿಗೆ ಚಲಾಯಿಸಿ ನಾರಾವಿ ಕಡೆಯಿಂದ ಗಣೇಶ್ ಗೌಡ ರವರು ಚಲಾಯಿಸಿಕೊಂಡು ಬರುತ್ತಿದ್ದ ಟಾಟಾ 407 ಗೂಡ್ಸ್ ವಾಹನ ಕ್ಕೆ ಬಲಬದಿ ಚಾಲಕನ ಡೋರ್‌ ಬಳಿಗೆ ರಭಸದಿಂದ ಡಿಕ್ಕಿ ಹೊಡೆದು ಅಪಘಾತ ಉಂಟುಮಾಡಿ ಬಳಿಕ ಈಚರ್ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದು, ಅಪಘಾತದಿಂದ ಗಣೇಶ್ ಗೌಡ ರವರ ವಾಹನ ಜಖಂಗೊಂಡಿದ್ದು, ಗಣೇಶ್ ಗೌಡ ರವರ ಸೊಂಟಕ್ಕೆ, ಬಲಕಾಲಿಗೆ ಗುದ್ದಿದ ಗಾಯಗಳಾಗಿ ಉಜಿರೆ ಬೆನಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!