23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

ಸುಲ್ಕೇರಿ: ಸುಲ್ಕೇರಿ ನರ್ಸರಿ ಬಳಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ ಹೊಡೆದು ಟಾಟಾ ಗೂಡ್ಸ್ ವಾಹನ ಚಾಲಕನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಎ.24 ರಂದು ರಾತ್ರಿ ನಡೆದಿದೆ.

ಎ.24 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಸುಲ್ಕೇರಿ ಗ್ರಾಮದ ಸುಲ್ಕೇರಿ ನರ್ಸರಿ ಬಳಿ ಗುರುವಾಯನಕೆರೆ – ನಾರಾವಿ – ಕಾರ್ಕಳ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಗುರುವಾಯನಕೆರೆ ಕಡೆಯಿಂದ ಈಚರ್ ಲಾರಿಯ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೇಲೆ ರಸ್ತೆಯ ಬಲಬದಿಗೆ ಚಲಾಯಿಸಿ ನಾರಾವಿ ಕಡೆಯಿಂದ ಗಣೇಶ್ ಗೌಡ ರವರು ಚಲಾಯಿಸಿಕೊಂಡು ಬರುತ್ತಿದ್ದ ಟಾಟಾ 407 ಗೂಡ್ಸ್ ವಾಹನ ಕ್ಕೆ ಬಲಬದಿ ಚಾಲಕನ ಡೋರ್‌ ಬಳಿಗೆ ರಭಸದಿಂದ ಡಿಕ್ಕಿ ಹೊಡೆದು ಅಪಘಾತ ಉಂಟುಮಾಡಿ ಬಳಿಕ ಈಚರ್ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದು, ಅಪಘಾತದಿಂದ ಗಣೇಶ್ ಗೌಡ ರವರ ವಾಹನ ಜಖಂಗೊಂಡಿದ್ದು, ಗಣೇಶ್ ಗೌಡ ರವರ ಸೊಂಟಕ್ಕೆ, ಬಲಕಾಲಿಗೆ ಗುದ್ದಿದ ಗಾಯಗಳಾಗಿ ಉಜಿರೆ ಬೆನಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya
error: Content is protected !!