25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

ಸುಲ್ಕೇರಿ: ಸುಲ್ಕೇರಿ ನರ್ಸರಿ ಬಳಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ ಹೊಡೆದು ಟಾಟಾ ಗೂಡ್ಸ್ ವಾಹನ ಚಾಲಕನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಎ.24 ರಂದು ರಾತ್ರಿ ನಡೆದಿದೆ.

ಎ.24 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಸುಲ್ಕೇರಿ ಗ್ರಾಮದ ಸುಲ್ಕೇರಿ ನರ್ಸರಿ ಬಳಿ ಗುರುವಾಯನಕೆರೆ – ನಾರಾವಿ – ಕಾರ್ಕಳ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಗುರುವಾಯನಕೆರೆ ಕಡೆಯಿಂದ ಈಚರ್ ಲಾರಿಯ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೇಲೆ ರಸ್ತೆಯ ಬಲಬದಿಗೆ ಚಲಾಯಿಸಿ ನಾರಾವಿ ಕಡೆಯಿಂದ ಗಣೇಶ್ ಗೌಡ ರವರು ಚಲಾಯಿಸಿಕೊಂಡು ಬರುತ್ತಿದ್ದ ಟಾಟಾ 407 ಗೂಡ್ಸ್ ವಾಹನ ಕ್ಕೆ ಬಲಬದಿ ಚಾಲಕನ ಡೋರ್‌ ಬಳಿಗೆ ರಭಸದಿಂದ ಡಿಕ್ಕಿ ಹೊಡೆದು ಅಪಘಾತ ಉಂಟುಮಾಡಿ ಬಳಿಕ ಈಚರ್ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದು, ಅಪಘಾತದಿಂದ ಗಣೇಶ್ ಗೌಡ ರವರ ವಾಹನ ಜಖಂಗೊಂಡಿದ್ದು, ಗಣೇಶ್ ಗೌಡ ರವರ ಸೊಂಟಕ್ಕೆ, ಬಲಕಾಲಿಗೆ ಗುದ್ದಿದ ಗಾಯಗಳಾಗಿ ಉಜಿರೆ ಬೆನಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಡಿ.12: ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya
error: Content is protected !!