ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

ಸುಲ್ಕೇರಿ: ಸುಲ್ಕೇರಿ ನರ್ಸರಿ ಬಳಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ ಹೊಡೆದು ಟಾಟಾ ಗೂಡ್ಸ್ ವಾಹನ ಚಾಲಕನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಎ.24 ರಂದು ರಾತ್ರಿ ನಡೆದಿದೆ.

ಎ.24 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಸುಲ್ಕೇರಿ ಗ್ರಾಮದ ಸುಲ್ಕೇರಿ ನರ್ಸರಿ ಬಳಿ ಗುರುವಾಯನಕೆರೆ – ನಾರಾವಿ – ಕಾರ್ಕಳ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಗುರುವಾಯನಕೆರೆ ಕಡೆಯಿಂದ ಈಚರ್ ಲಾರಿಯ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೇಲೆ ರಸ್ತೆಯ ಬಲಬದಿಗೆ ಚಲಾಯಿಸಿ ನಾರಾವಿ ಕಡೆಯಿಂದ ಗಣೇಶ್ ಗೌಡ ರವರು ಚಲಾಯಿಸಿಕೊಂಡು ಬರುತ್ತಿದ್ದ ಟಾಟಾ 407 ಗೂಡ್ಸ್ ವಾಹನ ಕ್ಕೆ ಬಲಬದಿ ಚಾಲಕನ ಡೋರ್‌ ಬಳಿಗೆ ರಭಸದಿಂದ ಡಿಕ್ಕಿ ಹೊಡೆದು ಅಪಘಾತ ಉಂಟುಮಾಡಿ ಬಳಿಕ ಈಚರ್ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದು, ಅಪಘಾತದಿಂದ ಗಣೇಶ್ ಗೌಡ ರವರ ವಾಹನ ಜಖಂಗೊಂಡಿದ್ದು, ಗಣೇಶ್ ಗೌಡ ರವರ ಸೊಂಟಕ್ಕೆ, ಬಲಕಾಲಿಗೆ ಗುದ್ದಿದ ಗಾಯಗಳಾಗಿ ಉಜಿರೆ ಬೆನಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ನಾವೂರು ಮತ್ತು ಕುತ್ಲೂರು ಗ್ರಾಮಗಳ ವಿದ್ಯುತ್ ಸಂಪರ್ಕಕ್ಕಾಗಿ ವನ್ಯಜೀವಿ ಮಂಡಳಿ ಅನುಮೋದನೆ: ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಅಧ್ಯಕ್ಷ ಶೇಖರ್ ಎಲ್.ಹೇಳಿಕೆ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಉಜಿರೆ: ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya
error: Content is protected !!