July 23, 2026
Uncategorized

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

ಅಳದಂಗಡಿ :ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬನಿಗೆ. ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.
ಚೂರಿ ಇರಿತ ಒಳಗಾದ ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಳದಂಗಡಿ ಸಂತೆ ಮಾರುಕಟ್ಟೆಯ ಒಳಗೆ ಎ. 26 ರಂದು ರಾತ್ರಿಯ ವೇಳೆ ಕ್ಷುಲ್ಲಕ ಕಾರಣಕ್ಕೆ ಶೀನ ಹಾಗೂ ಡೆನ್ನಿಸ್ ಪಿಂಟೋ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಶೀನ ಡೆನ್ನಿಸ್ ರನ್ನು ನೆಲಕ್ಕೆ ದೂಡಿ ಹಾಕಿ ಕುತ್ತಿಗೆಗೆ ಹಾಗೂ ಎಡಗೈ ತಟ್ಟೆಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಡೆನ್ನಿಸ್ ಪಿಂಟೊ ಅವರ ಕುತ್ತಿಗೆಗೆ ಗಂಭೀರವಾಗಿ ಗಾಯಗಳಾಗಿದೆ.

ಈ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಜನಸ್ಪಂದನ ಸಭೆಗೆ ಸ್ಪಂದನೆ ನೀಡದ ಬಾರ್ಯ ಗ್ರಾಮ ಪಂಚಾಯತ್ ಆಡಳಿತ: ಪಿಡಿಒ ವಿರುದ್ಧ ಶಾಸಕರು ಗರಂ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಮರೋಡಿ: ಮಡ್ಲದಲ್ಲಿ ಬರೆ ಕುಸಿತ ಮನೆಗೆ ಹಾನಿ

Suddi Udaya

ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕ್ಯಾಲೆಂಡರ್ ಬಿಡುಗಡೆ.

Suddi Udaya

ಲಾಯಿಲ ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ ಕಸ ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಕ್ಕೆ ಮೆಚ್ಚುಗೆ:

Suddi Udaya
error: Content is protected !!