April 29, 2025
Uncategorized

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

ತೆಕ್ಕಾರು: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಮೆರವಣಿಗೆ ಎ. 27 ರಂದು ನಡೆಯಿತು.

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಸ್ಥಾನದ ಮುಂಭಾಗದಲ್ಲಿ ಉದ್ಯಮಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನಾರಿಕೇಳ ಹೊಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ತೆಕ್ಕಾರು ಬ್ರಹ್ಮಕಲಶೋತ್ಸವ ಎ.25 ರಿಂದ ಮೇ 3 ವರೆಗೆ ನಡೆಯಲಿದೆ. ಪ್ರತಿದಿನ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ರಂಗೇರಲಿದೆ ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ.

ಸಹಸ್ರಲಿಂಗೇಶ್ವರ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ , ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಶ್ರಿ ರಾಮ ಶಾಲೆ ಸಂಚಾಲಕ ಯು ಜಿ.ರಾಧಾ, ಇಳಂತಿಲ ಕೇಶವ ಶಿಶು ಮಂದಿರ ಕಾರ್ಯದರ್ಶಿ ರವಿ ಇಳಂತಿಲ , ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಬನ್ನೆಂಗಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗುಣಾಕರ ಅಗ್ನಾಡಿ, ಪ್ರಮುಖರಾದ ಲಕ್ಷ್ಮಣ ಅಜಿರ, ಹೊರೆ ಕಾಣಿಕೆ ಸಮಿತಿ ಸಂಚಾಲಕ ತಿಲಕ್ ರಾಜ್ ವಿದ್ಯಾಪುರ, ಸಹ ಸಂಚಾಲಕ ಸತೀಶ್ ಬೇನಪ್ಪು ಮತ್ತು ಮೊದಲಾದವರು ಉಪಸ್ಥಿತರಿದ್ದರು.

Related posts

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya

ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ದಿ| ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ

Suddi Udaya
error: Content is protected !!