25.1 C
ಪುತ್ತೂರು, ಬೆಳ್ತಂಗಡಿ
June 15, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿವರದಿಶಾಲಾ ಕಾಲೇಜು

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

ಉಜಿರೆ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತಿದಾರ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಮೊಬೈಲ್ ಮೂಲಕ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏ.26 ರಂದು ಉಜಿರೆಯಲ್ಲಿ ಆರೋಪಿ ಕಬ್ಬಡಿ ಆಟಗಾರ ಕಾರ್ಕಳ ನಿವಾಸಿ ಸಯ್ಯದ್(24ವ) ಎಂಬಾತನಿಗೆ ಹಿಗ್ಗ ಮುಗ್ಗ ಥಳಿಸಿದ್ದಾರೆ. ಬಳಿಕ ಆತನ ಮೊಬೈಲ್ ಪರಿಶೀಲನೆ ನಡೆಸಿದಾಗ ನೂರಾರು ಯುವತಿಯ ಹಾಗೂ ಆತನ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದೆ.

ಆರೋಪಿಯನ್ನು ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.ಅಪ್ರಾಪ್ತ ವಿದ್ಯಾರ್ಥಿನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿದ ಮೇರೆಗೆ ಏ.26 ರಂದು ಆರೋಪಿ ಸಯ್ಯದ್(24) ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ಮಂಗಳೂರು ಫೋಕ್ಸೋ ನ್ಯಾಯಾಲಯದ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು.‌ ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮಕ್ಕೆ ವೇಣೂರು ಪೊಲೀಸ್ ಠಾಣೆಗೆ ಮನವಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya
error: Content is protected !!