22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

ತೆಕ್ಕಾರು: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಮೆರವಣಿಗೆ ಎ. 27 ರಂದು ನಡೆಯಿತು.

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಸ್ಥಾನದ ಮುಂಭಾಗದಲ್ಲಿ ಉದ್ಯಮಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನಾರಿಕೇಳ ಹೊಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ತೆಕ್ಕಾರು ಬ್ರಹ್ಮಕಲಶೋತ್ಸವ ಎ.25 ರಿಂದ ಮೇ 3 ವರೆಗೆ ನಡೆಯಲಿದೆ. ಪ್ರತಿದಿನ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ರಂಗೇರಲಿದೆ ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ.

ಸಹಸ್ರಲಿಂಗೇಶ್ವರ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ , ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಶ್ರಿ ರಾಮ ಶಾಲೆ ಸಂಚಾಲಕ ಯು ಜಿ.ರಾಧಾ, ಇಳಂತಿಲ ಕೇಶವ ಶಿಶು ಮಂದಿರ ಕಾರ್ಯದರ್ಶಿ ರವಿ ಇಳಂತಿಲ , ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಬನ್ನೆಂಗಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗುಣಾಕರ ಅಗ್ನಾಡಿ, ಪ್ರಮುಖರಾದ ಲಕ್ಷ್ಮಣ ಅಜಿರ, ಹೊರೆ ಕಾಣಿಕೆ ಸಮಿತಿ ಸಂಚಾಲಕ ತಿಲಕ್ ರಾಜ್ ವಿದ್ಯಾಪುರ, ಸಹ ಸಂಚಾಲಕ ಸತೀಶ್ ಬೇನಪ್ಪು ಮತ್ತು ಮೊದಲಾದವರು ಉಪಸ್ಥಿತರಿದ್ದರು.

Related posts

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ ಪೂಜೆ

Suddi Udaya

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya
error: Content is protected !!