July 23, 2026
Uncategorized

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

ತೆಕ್ಕಾರು: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಮೆರವಣಿಗೆ ಎ. 27 ರಂದು ನಡೆಯಿತು.

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಸ್ಥಾನದ ಮುಂಭಾಗದಲ್ಲಿ ಉದ್ಯಮಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನಾರಿಕೇಳ ಹೊಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ತೆಕ್ಕಾರು ಬ್ರಹ್ಮಕಲಶೋತ್ಸವ ಎ.25 ರಿಂದ ಮೇ 3 ವರೆಗೆ ನಡೆಯಲಿದೆ. ಪ್ರತಿದಿನ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ರಂಗೇರಲಿದೆ ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ.

ಸಹಸ್ರಲಿಂಗೇಶ್ವರ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ , ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಶ್ರಿ ರಾಮ ಶಾಲೆ ಸಂಚಾಲಕ ಯು ಜಿ.ರಾಧಾ, ಇಳಂತಿಲ ಕೇಶವ ಶಿಶು ಮಂದಿರ ಕಾರ್ಯದರ್ಶಿ ರವಿ ಇಳಂತಿಲ , ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಬನ್ನೆಂಗಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗುಣಾಕರ ಅಗ್ನಾಡಿ, ಪ್ರಮುಖರಾದ ಲಕ್ಷ್ಮಣ ಅಜಿರ, ಹೊರೆ ಕಾಣಿಕೆ ಸಮಿತಿ ಸಂಚಾಲಕ ತಿಲಕ್ ರಾಜ್ ವಿದ್ಯಾಪುರ, ಸಹ ಸಂಚಾಲಕ ಸತೀಶ್ ಬೇನಪ್ಪು ಮತ್ತು ಮೊದಲಾದವರು ಉಪಸ್ಥಿತರಿದ್ದರು.

Related posts

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

Suddi Udaya

ಸರ್ವಿಸ್ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್ ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಬೆಳ್ತಂಗಡಿ ವರ್ತಕರ ಸಂಘದಿಂದ ಮನವಿ

Suddi Udaya

ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya
error: Content is protected !!