23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

ತೆಕ್ಕಾರು: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಮೆರವಣಿಗೆ ಎ. 27 ರಂದು ನಡೆಯಿತು.

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಸ್ಥಾನದ ಮುಂಭಾಗದಲ್ಲಿ ಉದ್ಯಮಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನಾರಿಕೇಳ ಹೊಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ತೆಕ್ಕಾರು ಬ್ರಹ್ಮಕಲಶೋತ್ಸವ ಎ.25 ರಿಂದ ಮೇ 3 ವರೆಗೆ ನಡೆಯಲಿದೆ. ಪ್ರತಿದಿನ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ರಂಗೇರಲಿದೆ ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ.

ಸಹಸ್ರಲಿಂಗೇಶ್ವರ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ , ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಶ್ರಿ ರಾಮ ಶಾಲೆ ಸಂಚಾಲಕ ಯು ಜಿ.ರಾಧಾ, ಇಳಂತಿಲ ಕೇಶವ ಶಿಶು ಮಂದಿರ ಕಾರ್ಯದರ್ಶಿ ರವಿ ಇಳಂತಿಲ , ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಬನ್ನೆಂಗಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗುಣಾಕರ ಅಗ್ನಾಡಿ, ಪ್ರಮುಖರಾದ ಲಕ್ಷ್ಮಣ ಅಜಿರ, ಹೊರೆ ಕಾಣಿಕೆ ಸಮಿತಿ ಸಂಚಾಲಕ ತಿಲಕ್ ರಾಜ್ ವಿದ್ಯಾಪುರ, ಸಹ ಸಂಚಾಲಕ ಸತೀಶ್ ಬೇನಪ್ಪು ಮತ್ತು ಮೊದಲಾದವರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya
error: Content is protected !!