23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

ತೆಕ್ಕಾರು: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಮೆರವಣಿಗೆ ಎ. 27 ರಂದು ನಡೆಯಿತು.

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಸ್ಥಾನದ ಮುಂಭಾಗದಲ್ಲಿ ಉದ್ಯಮಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನಾರಿಕೇಳ ಹೊಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ತೆಕ್ಕಾರು ಬ್ರಹ್ಮಕಲಶೋತ್ಸವ ಎ.25 ರಿಂದ ಮೇ 3 ವರೆಗೆ ನಡೆಯಲಿದೆ. ಪ್ರತಿದಿನ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ರಂಗೇರಲಿದೆ ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ.

ಸಹಸ್ರಲಿಂಗೇಶ್ವರ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ , ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಶ್ರಿ ರಾಮ ಶಾಲೆ ಸಂಚಾಲಕ ಯು ಜಿ.ರಾಧಾ, ಇಳಂತಿಲ ಕೇಶವ ಶಿಶು ಮಂದಿರ ಕಾರ್ಯದರ್ಶಿ ರವಿ ಇಳಂತಿಲ , ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಬನ್ನೆಂಗಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗುಣಾಕರ ಅಗ್ನಾಡಿ, ಪ್ರಮುಖರಾದ ಲಕ್ಷ್ಮಣ ಅಜಿರ, ಹೊರೆ ಕಾಣಿಕೆ ಸಮಿತಿ ಸಂಚಾಲಕ ತಿಲಕ್ ರಾಜ್ ವಿದ್ಯಾಪುರ, ಸಹ ಸಂಚಾಲಕ ಸತೀಶ್ ಬೇನಪ್ಪು ಮತ್ತು ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya
error: Content is protected !!