July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

ಕಳಿಯ : ಇಲ್ಲಿಯ ಹನುಮಾನ್ ನಗರ ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿಯ 6ನೇ ವರ್ಷದ ವಾರ್ಷಿಕೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಎ.27 ರಂದು ನಡೆಯಿತು.
ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೆಲ್ಲಿಕಟ್ಟೆ, ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನ ಮಂಡಳಿ, ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ ಹಾಗೂ ಮಧ್ಯಾಹ್ನ ಮಹಾ ಪೂಜೆ ಜರುಗಿತು.
ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಲೋಹಿತಾಶ್ವ ಗೌಡ ವಾರ್ಷಿಕ ವರದಿ ಮಂಡಿಸಿದರು.


ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಸಹಾಯಕ ಪ್ರಾಚಾರ್ಯರಾದ ಡಾ.ರವಿ ಎಂ.ಎನ್.ಮಂಡ್ಯ ಧಾರ್ಮಿಕ ಉಪನ್ಯಾಸ ನೀಡಿದರು.
ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ., ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಭಜನಾ ಮಂಡಳಿ ಗೌರವಾಧ್ಯಕ್ಷ ಚೆನ್ನಪ್ಪ ಗೌಡ ಹೀರ್ಯ,ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ತುಕರಾಮ ಪೂಜಾರಿ ,ವಾಯುಸೇನೆ ಸೈನಿಕ ಪ್ರಮೋದ್ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಂಬಳದಡ್ಡ ದಿ.ರಮಾನಂದ ಪೂಜಾರಿ ಮತ್ತು ದಿ.ಸೀತಮ್ಮ, ಸ್ಮರಣಾರ್ಥ ಮರದ ದೇವರ ದೀಪದ ಮಂಟಪವನ್ನು ಮಕ್ಕಳು‌ ಭಜನಾ ಮಂಡಳಿಗೆ ಕೊಡುಗೆಯಾಗಿ ನೀಡಿದರು.
‍ಭಜನಾ ಮಂಡಳಿ ಉಪಾಧ್ಯಕ್ಷ ಯಶೋಧರ ಗೌಡ, ಕೋಶಾಧಿಕಾರಿ ದೀಕ್ಷಿತ್, ಸಂಚಾಲಕ ಯೋಗೀಶ್ ಗೌಡ, ಸದಸ್ಯರು ಹಾಗೂ ಭಕ್ತರು ಮತ್ತಿತರರಿದ್ದರು.
ಡಾಕಯ್ಯ ಗೌಡ ಹೀರ್ಯ ನಿರೂಪಿಸಿ, ಮಂಡಳಿ ಅರ್ಚಕ ಜಗದೀಶ್ ಗೌಡ ವಂದಿಸಿದರು.

Related posts

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya
error: Content is protected !!