23.3 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

ಬೆಳ್ತಂಗಡಿ: ಸಾಮಾಜಿಕ ಸೇವೆಯಲ್ಲಿ ಸದಾಮುಂದಿರುವ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 554 ಸೇವಯೋಜನೆಯಾಗಿ ಮೇಲಂತಬೆಟ್ಟು ಕಬ್ಬಿಣಹಿತ್ತಿಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ನೇತ್ರಾವತಿ ಎಂಬುವರು 4 ತಿಂಗಳ ಹಿಂದೆ ಬೆನ್ನಿಗೆ ಮರ ಬಿದ್ದ ಕಾರಣ ಗಂಭೀರವಾದ ಆರೋಗ್ಯ ಸಮಸ್ಯೆಯು ಉಂಟಾಗಿ ವೈದ್ಯಕೀಯ ತಪಾಸಣೆಗಳು ಮತ್ತು ಚಿಕಿತ್ಸೆಗಾಗಿ ಹೆಚ್ಚಿನ ವೆಚ್ಚವಾಗುತ್ತಿರುವ ಹಿನ್ನೆಲೆಯಲ್ಲಿ, ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇವರಿಗೆ ರಾಜಕೇಸರಿ ಟ್ರಸ್ಟ್ ವತಿಯಿಂದ 25 ಕೆಜಿ ಅಕ್ಕಿ ಮತ್ತು ದಿನ ಸಾಮಾಗ್ರಿಗಳೊಂದಿಗೆ ಮತ್ತು ವೈದ್ಯಕೀಯ ತಪಾಸಣೆಗಾಗಿ 4000 ಕಿರು ಸಹಾಯವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ವಿನೋದ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ , ಸಂಘಟನಾ ಪ್ರಮುಖರಾದ ಸತೀಶ್ ಗೌಡ ಕಂಗಿತ್ತಿಲ್ಲ, ಸಹ ಸಂಚಾಲಕರಾದ ಶರತ್ ಕರಾಯ, ನಿಕಟಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ, ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರು ಮತ್ತು ಜೆ ಸಿ ಐ ಭಾರತದ ವಲಯ ತರಬೇತುದಾರರಾದ ಶಂಕರ್ ರಾವ್ ಉಪಸ್ಥಿತರಿದ್ದರು.

Related posts

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya
error: Content is protected !!