September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

ಬೆಳ್ತಂಗಡಿ : ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿ ಪ್ರಮುಖರ ಸಭೆಯು ಬಿಎಂಎಸ್ ತಾಲೂಕು ಸಮಿತಿ ಅಧ್ಯಕ್ಷ ಉದಯ ಬಿ ಕೆ ಇವರ ಅಧ್ಯಕ್ಷತೆಯಲ್ಲಿ ಭಾರತೀಯ ಮಜ್ದೂರ್ ಸಂಘದ ಕಚೇರಿ ವಠಾರದಲ್ಲಿ ನಡೆಸಲಾಯಿತು.

ಈ ಸಭೆಯಲ್ಲಿ ಇತ್ತೀಚೆಗೆ ಮೃತರಾದ ಭಾರತೀಯ ಮಜ್ದೂರ್ ಸಂಘದ ಪೂರ್ಣಾವಧಿ ಕಾರ್ಯಕರ್ತರು ಹಾಗೂ ಹಿರಿಯ ನಾಯಕರಾದ ಡಿ.ಕೆ ಸದಾಶಿವ ಅವರಿಗೆ ಹಾಗೂ ಕಾಶ್ಮೀರದ ಪೆಹಲ್ ಗಾಮ್ ನಲ್ಲಿ ಭಯೋತ್ಪಾದಕರ ದಾಳಿಗೆ ತುತ್ತಾದ 26 ಜನ ಭಾರತೀಯರ ಸಾವಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಯನ್ನು ಸಮರ್ಪಿಸಲಾಯತು ಮತ್ತು ಪ್ರಸ್ತುತ ಸರಕಾರ ಹೊಸ ನಿಯಮದಿಂದ ಕಾರ್ಮಿಕರಿಗೆ ಬಹಳಷ್ಟು ತೊಂದರೆ ಆಗುತ್ತಿದ್ದೂ ಈ ಬಗ್ಗೆ ಸರಕಾರದ ವಿರುದ್ಧ ಪ್ರತಿಭಟನೆ ಸಭೆಯನ್ನು ಮಾಡುವುದೆಂದು ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ದ.ಕ. ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಮಜ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್, ಉದಯ್ ಅಚಾರ್ಯ ಉಜಿರೆ, ಬಿಎಂಎಸ್ ಕೊಕ್ಕಡ ವಲಯದ ಸಂಚಾಲಕರಾದ ಚಂದ್ರಶೇಖರ್ ಗಾನಗಿರಿ ಹಾಗೂ ತಾಲೂಕಿನ ವಿವಿಧ ಗ್ರಾಮದ ಬಿಎಂಎಸ್ ನ ಅಧ್ಯಕ್ಷರು, ಕಾರ್ಯದರ್ಶಿ ಉಪಸ್ಥಿತರಿದ್ದರು. ಕುಮಾರ್ ನಾಥ್ ಸ್ವಾಗತಿಸಿ ಜಯರಾಜ ಸಾಲಿಯಾನ್ ವಂದಿಸಿದರು.

Related posts

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!