September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

ನೇಲ್ಯಡ್ಕ : ಸೇವಾಭಾರತಿ, ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್‌ ತರಬೇತಿ ಶಿಬಿರದ ಉದ್ಘಾಟನೆ ಏ 27 ರಂದು ನೇಲ್ಯಡ್ಕದಲ್ಲಿ ನಡೆಯಿತು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಕೌಶಲ್ಯ NRLM ಮೇಲ್ವಿಚಾರಕರು ಶ್ರೀಮತಿ ವೀಣಾಶ್ರೀ ಕೆ ಕೆ ಚಾಲನೆ ನೀಡಿ, ಭಾಗವಹಿಸಿದ ಮಹಿಳೆಯರಿಗೆ ಶುಭಹಾರೈಸಿದರು. ಈ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ ಮಹತ್ವದ ಹೆಜ್ಜೆಯಾಗಿದೆ ಎಂದರು.

ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷರಾದ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ಸಿಇಒ ಸ್ವರ್ಣಗೌರಿ ಮಾತನಾಡಿ, ಟೈಲರಿಂಗ್ ಕಲಿಕೆ ಅನೇಕ ಉದ್ಯೋಗದ ಅವಕಾಶಗಳನ್ನು ಒದಗಿಸಬಲ್ಲದು. “ದೀಪ ಜ್ಯೋತಿ ಹೇಗೆ ಬೆಳಗುತ್ತದೋ, ಹಾಗೆಯೇ ನೀವು ಈ ವಿದ್ಯೆಯನ್ನು ಉಪಯೋಗಿಸಿ ಸಮಾಜದಲ್ಲಿ ಬೆಳಗಬೇಕು” ಎಂದು ಶುಭ ಹಾರೈಸಿದರು.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ, ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಪ್ರತಿಮಾ, ನೇಲ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಶ್ರೀಮತಿ ವಸಂತಿ ಕೆ, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಖಜಾಂಚಿ ಶ್ರೀಮತಿ ಬಬಿತಾ, ಟೈಲರಿಂಗ್ ತರಬೇತುದಾರರು ಶ್ರೀಮತಿ ಹರಿಣಾಕ್ಷಿ ಬಿ.ಪಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇಲ್ಯಡ್ಕ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಭವಾನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 27 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದು, ಮಹಿಳಾ ಸಬಲಿಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಕೃಷಿ ಉದ್ಯೋಗ ಸಖಿ ಗೀತಾ, ಪಶು ಸಖಿ ವೇದಾವತಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ಅಮಿತ ಪ್ರಾರ್ಥನೆಯನ್ನು ಮಾಡಿ, ಕಾರ್ಯಕ್ರಮದಲ್ಲಿ ಮುಖ್ಯ ಪುಸ್ತಕ ಬರಹಗಾರರು ಶ್ರೀಮತಿ ನೀತಾ ಸ್ವಾಗತಿಸಿ, ಸೇವಾಭಾರತಿಯ ಡಾಕ್ಯುಮೆಂಟೇಶನ್, ಮೋನಿಟರಿಂಗ್ ಮತ್ತು ಕೋ – ಆರ್ಡಿನೇಟರ್ ಸುಮ ನಿರೂಪಿಸಿ. ಸ್ಥಳೀಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಹೇಮಲತಾ ಧನ್ಯವಾದವಿತ್ತರು.

Related posts

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಮತ್ತು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya
error: Content is protected !!