April 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

ಕಳಿಯ : ಇಲ್ಲಿಯ ಹನುಮಾನ್ ನಗರ ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿಯ 6ನೇ ವರ್ಷದ ವಾರ್ಷಿಕೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಎ.27 ರಂದು ನಡೆಯಿತು.
ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೆಲ್ಲಿಕಟ್ಟೆ, ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನ ಮಂಡಳಿ, ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ ಹಾಗೂ ಮಧ್ಯಾಹ್ನ ಮಹಾ ಪೂಜೆ ಜರುಗಿತು.
ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಲೋಹಿತಾಶ್ವ ಗೌಡ ವಾರ್ಷಿಕ ವರದಿ ಮಂಡಿಸಿದರು.


ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಸಹಾಯಕ ಪ್ರಾಚಾರ್ಯರಾದ ಡಾ.ರವಿ ಎಂ.ಎನ್.ಮಂಡ್ಯ ಧಾರ್ಮಿಕ ಉಪನ್ಯಾಸ ನೀಡಿದರು.
ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ., ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಭಜನಾ ಮಂಡಳಿ ಗೌರವಾಧ್ಯಕ್ಷ ಚೆನ್ನಪ್ಪ ಗೌಡ ಹೀರ್ಯ,ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ತುಕರಾಮ ಪೂಜಾರಿ ,ವಾಯುಸೇನೆ ಸೈನಿಕ ಪ್ರಮೋದ್ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಂಬಳದಡ್ಡ ದಿ.ರಮಾನಂದ ಪೂಜಾರಿ ಮತ್ತು ದಿ.ಸೀತಮ್ಮ, ಸ್ಮರಣಾರ್ಥ ಮರದ ದೇವರ ದೀಪದ ಮಂಟಪವನ್ನು ಮಕ್ಕಳು‌ ಭಜನಾ ಮಂಡಳಿಗೆ ಕೊಡುಗೆಯಾಗಿ ನೀಡಿದರು.
‍ಭಜನಾ ಮಂಡಳಿ ಉಪಾಧ್ಯಕ್ಷ ಯಶೋಧರ ಗೌಡ, ಕೋಶಾಧಿಕಾರಿ ದೀಕ್ಷಿತ್, ಸಂಚಾಲಕ ಯೋಗೀಶ್ ಗೌಡ, ಸದಸ್ಯರು ಹಾಗೂ ಭಕ್ತರು ಮತ್ತಿತರರಿದ್ದರು.
ಡಾಕಯ್ಯ ಗೌಡ ಹೀರ್ಯ ನಿರೂಪಿಸಿ, ಮಂಡಳಿ ಅರ್ಚಕ ಜಗದೀಶ್ ಗೌಡ ವಂದಿಸಿದರು.

Related posts

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮ

Suddi Udaya
error: Content is protected !!