24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

ಕಳಿಯ : ಇಲ್ಲಿಯ ಹನುಮಾನ್ ನಗರ ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿಯ 6ನೇ ವರ್ಷದ ವಾರ್ಷಿಕೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಎ.27 ರಂದು ನಡೆಯಿತು.
ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೆಲ್ಲಿಕಟ್ಟೆ, ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನ ಮಂಡಳಿ, ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ ಹಾಗೂ ಮಧ್ಯಾಹ್ನ ಮಹಾ ಪೂಜೆ ಜರುಗಿತು.
ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಲೋಹಿತಾಶ್ವ ಗೌಡ ವಾರ್ಷಿಕ ವರದಿ ಮಂಡಿಸಿದರು.


ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಸಹಾಯಕ ಪ್ರಾಚಾರ್ಯರಾದ ಡಾ.ರವಿ ಎಂ.ಎನ್.ಮಂಡ್ಯ ಧಾರ್ಮಿಕ ಉಪನ್ಯಾಸ ನೀಡಿದರು.
ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ., ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಭಜನಾ ಮಂಡಳಿ ಗೌರವಾಧ್ಯಕ್ಷ ಚೆನ್ನಪ್ಪ ಗೌಡ ಹೀರ್ಯ,ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ತುಕರಾಮ ಪೂಜಾರಿ ,ವಾಯುಸೇನೆ ಸೈನಿಕ ಪ್ರಮೋದ್ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಂಬಳದಡ್ಡ ದಿ.ರಮಾನಂದ ಪೂಜಾರಿ ಮತ್ತು ದಿ.ಸೀತಮ್ಮ, ಸ್ಮರಣಾರ್ಥ ಮರದ ದೇವರ ದೀಪದ ಮಂಟಪವನ್ನು ಮಕ್ಕಳು‌ ಭಜನಾ ಮಂಡಳಿಗೆ ಕೊಡುಗೆಯಾಗಿ ನೀಡಿದರು.
‍ಭಜನಾ ಮಂಡಳಿ ಉಪಾಧ್ಯಕ್ಷ ಯಶೋಧರ ಗೌಡ, ಕೋಶಾಧಿಕಾರಿ ದೀಕ್ಷಿತ್, ಸಂಚಾಲಕ ಯೋಗೀಶ್ ಗೌಡ, ಸದಸ್ಯರು ಹಾಗೂ ಭಕ್ತರು ಮತ್ತಿತರರಿದ್ದರು.
ಡಾಕಯ್ಯ ಗೌಡ ಹೀರ್ಯ ನಿರೂಪಿಸಿ, ಮಂಡಳಿ ಅರ್ಚಕ ಜಗದೀಶ್ ಗೌಡ ವಂದಿಸಿದರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

‘ಉಮಂಗ್- 2026’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ: ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya
error: Content is protected !!