23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

ಕೊರಿಂಜ: ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾ ಭವನದಲ್ಲಿ ಯೋಗ ತರಬೇತಿ ನಡೆಸುವ ಬಗ್ಗೆ ಪೂರ್ವ ಭಾವಿ ಸಭೆಯು ಎ.27 ರಂದು ನಡೆಯಿತು.

ಗುರುದೇವ ಶ್ರೀ ರವಿಶಂಕರ ಜಿ. ಯವರ ಸುದರ್ಶನ ಕ್ರಿಯೆಯ ಬಗ್ಗೆ ಭೌತಿಕ ಕ್ರಿಯೆಯ ಪ್ರಯೋಜನ ದ ಬಗ್ಗೆ ಅವರ ಶಿಷ್ಯೆ ಕಲಾ ಕಾಸರಗೋಡು ಇವರು ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಮಾತನಾಡಿ ಮೇ 13 ರಿಂದ 20 ರವರಗೆ ಸಂಜೆ 6ರಿಂದ 8.30 ತನಕ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯುವ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ವೃದ್ಧಿಸುವ ಪ್ರಯೋಜನ ಪಡೆದುಕೊಳ್ಳಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಧ.ಗ್ರಾ. ಯೋಜನೆಯ ನಿವೃತ್ತ ಮೇಲ್ವಿಚಾರಕಿ ಶ್ರೀಮತಿ ವಾರಿಜ ವಿ. ಶೆಟ್ಟಿ ಕೊರಿಂಜ ಉಪಸ್ಥಿತರಿದ್ದರು.

ಉರುವಾಲು ವಿಭಾಗದ ಸೇವಾಪ್ರತಿನಿಧಿ ಸೀತಾರಾಮ ಆಳ್ವ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವಿ.ಸೂ: ಯೋಗ ಶಿಬಿರದಲ್ಲಿ ಭಾಗವಹಿಸುವವರು ದೂರವಾಣಿ ಸಂಖ್ಯೆ 9448061006 ಸಂಪರ್ಕಿಸಿ.

Related posts

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya
error: Content is protected !!