25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಶ್ರೀಮತಿ ಸುನೀತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ವೇಳೆ ಅನುಗ್ರಹ ತಂಡಕ್ಕೆ ಜವಾಬ್ದಾರಿ ನೀಡಲಾಗಿತ್ತು, ಕೃಷಿ ಅಧಿಕಾರಿ ರಾಮ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಸುಜಾತ, ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ಸಂಘದ ಅಧ್ಯಕ್ಷರು ಒಕ್ಕೂಟದ ಎಲ್ಲಾ ತಂಡದ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದರು. ಅನುಗ್ರಹ ಸಂಘದ ಸದಸ್ಯರಾದ ಶ್ರೀಮತಿ ಅನ್ನಮ್ಮ, ಶ್ರೀಮತಿ ವೇದಾವತಿ ಇವರು ಗೀತೆಯನ್ನು ಹಾಡಿದರು.

ಶ್ರೀಮತಿ ಜಯ ಮೋನಪ್ಪ ಗೌಡ ಸ್ವಾಗತಿಸಿ , ಶ್ರೀಮತಿ ಸಾಲಿ ವರ್ಗಿಸ್ ಸಂಘದ ವರದಿ ವಾಚಿಸಿದರು. ಶ್ರೀಮತಿ ಜಯಂತಿ ನಟರಾಜ್ ಧನ್ಯವಾದವಿತ್ತರು. ಶ್ರೀಮತಿ ಅನ್ನಮ್ಮ ಜೋರ್ಜ್ ನಿರೂಪಿಸಿದರು.

Related posts

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya
error: Content is protected !!