25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

ಬೆಳ್ತಂಗಡಿ: ಸಾಮಾಜಿಕ ಸೇವೆಯಲ್ಲಿ ಸದಾಮುಂದಿರುವ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 554 ಸೇವಯೋಜನೆಯಾಗಿ ಮೇಲಂತಬೆಟ್ಟು ಕಬ್ಬಿಣಹಿತ್ತಿಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ನೇತ್ರಾವತಿ ಎಂಬುವರು 4 ತಿಂಗಳ ಹಿಂದೆ ಬೆನ್ನಿಗೆ ಮರ ಬಿದ್ದ ಕಾರಣ ಗಂಭೀರವಾದ ಆರೋಗ್ಯ ಸಮಸ್ಯೆಯು ಉಂಟಾಗಿ ವೈದ್ಯಕೀಯ ತಪಾಸಣೆಗಳು ಮತ್ತು ಚಿಕಿತ್ಸೆಗಾಗಿ ಹೆಚ್ಚಿನ ವೆಚ್ಚವಾಗುತ್ತಿರುವ ಹಿನ್ನೆಲೆಯಲ್ಲಿ, ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇವರಿಗೆ ರಾಜಕೇಸರಿ ಟ್ರಸ್ಟ್ ವತಿಯಿಂದ 25 ಕೆಜಿ ಅಕ್ಕಿ ಮತ್ತು ದಿನ ಸಾಮಾಗ್ರಿಗಳೊಂದಿಗೆ ಮತ್ತು ವೈದ್ಯಕೀಯ ತಪಾಸಣೆಗಾಗಿ 4000 ಕಿರು ಸಹಾಯವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ವಿನೋದ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ , ಸಂಘಟನಾ ಪ್ರಮುಖರಾದ ಸತೀಶ್ ಗೌಡ ಕಂಗಿತ್ತಿಲ್ಲ, ಸಹ ಸಂಚಾಲಕರಾದ ಶರತ್ ಕರಾಯ, ನಿಕಟಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ, ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರು ಮತ್ತು ಜೆ ಸಿ ಐ ಭಾರತದ ವಲಯ ತರಬೇತುದಾರರಾದ ಶಂಕರ್ ರಾವ್ ಉಪಸ್ಥಿತರಿದ್ದರು.

Related posts

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya
error: Content is protected !!