22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

ಬೆಳ್ತಂಗಡಿ: ಸಾಮಾಜಿಕ ಸೇವೆಯಲ್ಲಿ ಸದಾಮುಂದಿರುವ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 554 ಸೇವಯೋಜನೆಯಾಗಿ ಮೇಲಂತಬೆಟ್ಟು ಕಬ್ಬಿಣಹಿತ್ತಿಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ನೇತ್ರಾವತಿ ಎಂಬುವರು 4 ತಿಂಗಳ ಹಿಂದೆ ಬೆನ್ನಿಗೆ ಮರ ಬಿದ್ದ ಕಾರಣ ಗಂಭೀರವಾದ ಆರೋಗ್ಯ ಸಮಸ್ಯೆಯು ಉಂಟಾಗಿ ವೈದ್ಯಕೀಯ ತಪಾಸಣೆಗಳು ಮತ್ತು ಚಿಕಿತ್ಸೆಗಾಗಿ ಹೆಚ್ಚಿನ ವೆಚ್ಚವಾಗುತ್ತಿರುವ ಹಿನ್ನೆಲೆಯಲ್ಲಿ, ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇವರಿಗೆ ರಾಜಕೇಸರಿ ಟ್ರಸ್ಟ್ ವತಿಯಿಂದ 25 ಕೆಜಿ ಅಕ್ಕಿ ಮತ್ತು ದಿನ ಸಾಮಾಗ್ರಿಗಳೊಂದಿಗೆ ಮತ್ತು ವೈದ್ಯಕೀಯ ತಪಾಸಣೆಗಾಗಿ 4000 ಕಿರು ಸಹಾಯವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ವಿನೋದ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ , ಸಂಘಟನಾ ಪ್ರಮುಖರಾದ ಸತೀಶ್ ಗೌಡ ಕಂಗಿತ್ತಿಲ್ಲ, ಸಹ ಸಂಚಾಲಕರಾದ ಶರತ್ ಕರಾಯ, ನಿಕಟಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ, ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರು ಮತ್ತು ಜೆ ಸಿ ಐ ಭಾರತದ ವಲಯ ತರಬೇತುದಾರರಾದ ಶಂಕರ್ ರಾವ್ ಉಪಸ್ಥಿತರಿದ್ದರು.

Related posts

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!