September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

ಬೆಳ್ತಂಗಡಿ: ಸಾಮಾಜಿಕ ಸೇವೆಯಲ್ಲಿ ಸದಾಮುಂದಿರುವ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 554 ಸೇವಯೋಜನೆಯಾಗಿ ಮೇಲಂತಬೆಟ್ಟು ಕಬ್ಬಿಣಹಿತ್ತಿಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ನೇತ್ರಾವತಿ ಎಂಬುವರು 4 ತಿಂಗಳ ಹಿಂದೆ ಬೆನ್ನಿಗೆ ಮರ ಬಿದ್ದ ಕಾರಣ ಗಂಭೀರವಾದ ಆರೋಗ್ಯ ಸಮಸ್ಯೆಯು ಉಂಟಾಗಿ ವೈದ್ಯಕೀಯ ತಪಾಸಣೆಗಳು ಮತ್ತು ಚಿಕಿತ್ಸೆಗಾಗಿ ಹೆಚ್ಚಿನ ವೆಚ್ಚವಾಗುತ್ತಿರುವ ಹಿನ್ನೆಲೆಯಲ್ಲಿ, ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇವರಿಗೆ ರಾಜಕೇಸರಿ ಟ್ರಸ್ಟ್ ವತಿಯಿಂದ 25 ಕೆಜಿ ಅಕ್ಕಿ ಮತ್ತು ದಿನ ಸಾಮಾಗ್ರಿಗಳೊಂದಿಗೆ ಮತ್ತು ವೈದ್ಯಕೀಯ ತಪಾಸಣೆಗಾಗಿ 4000 ಕಿರು ಸಹಾಯವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ವಿನೋದ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ , ಸಂಘಟನಾ ಪ್ರಮುಖರಾದ ಸತೀಶ್ ಗೌಡ ಕಂಗಿತ್ತಿಲ್ಲ, ಸಹ ಸಂಚಾಲಕರಾದ ಶರತ್ ಕರಾಯ, ನಿಕಟಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ, ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರು ಮತ್ತು ಜೆ ಸಿ ಐ ಭಾರತದ ವಲಯ ತರಬೇತುದಾರರಾದ ಶಂಕರ್ ರಾವ್ ಉಪಸ್ಥಿತರಿದ್ದರು.

Related posts

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ:ಸೌತಡ್ಕ ದಿವ್ಯಾಂಗರ ಪುನಶ್ಚೇತನ ಕೇಂದ್ರದಿಂದ ಹತ್ತಿಯಿಂದ ಬತ್ತಿ ಮಾಡುವ ಯಂತ್ರ ವಿತರಣೆ

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ಸ್ವಚ್ಛ ಸಂಕೀರ್ಣದಲ್ಲಿ ಸಾಕಲಾದ ನಾಟಿ ಕೋಳಿಗಳ ಮಾರಾಟ

Suddi Udaya
error: Content is protected !!