37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನಾ ಸಮಾರಂಭವು ಎ.28 ರಂದು ಐ.ಬಿ ರಸ್ತೆಯಲ್ಲಿರುವ ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ನಡೆಯಿತು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು.

ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಭಾಂಗಣ ಉದ್ಘಾಟಿಸಿದರು. ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ ಅಧ್ಯಕ್ಷತೆ ವಹಿಸಿದ್ದರು. ಪ.ಪಂ.ಅಧ್ಯಕ್ಷ ಜಯಾನಂದ ಗೌಡ, ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ ಹಾಗೂ ದ.ಕ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಕಾರ್ಯಕ್ರಮಗಳ ಸಂಯೋಜಕಿ ಕಾರ್ಯದರ್ಶಿ ಅಶ್ವಿನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ನಿವೃತ್ತ ಆರೋಗ್ಯಾಧಿಕಾರಿ ಭಾರತಿ ಪಿ.ವಿ. ಅವರನ್ನು ಸನ್ಮಾನಿಸಲಾಯಿತು. ವಕೀಲರಾದ ಮನೋಹರ ಕುಮಾರ್ ಇಳಂತಿಲ ಹಾಗೂ ಅನಿಲ್ ಕುಮಾರ್ , ಉಪಾಧ್ಯಕ್ಷೆ ಉಮಾ ಆರ್.ರಾವ್, ಜತೆ ಕಾರ್ಯದರ್ಶಿ ವಿನೋದಿನಿ ರಾಮಪ್ಪ, ಕೋಶಾಧಿಕಾರಿ ಉಷಾ ಲಕ್ಷ್ಮಣ ಗೌಡ ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

ಯಶೋಧಾ, ಗಾಯತ್ರಿ ಹಾಗೂ ಶ್ವೇತಾ ಪ್ರಾರ್ಥಿಸಿದರು.ಸಂಚಾಲಕಿ ಲೋಕೇಶ್ವರಿ ವಿನಯಚ್ಚಂದ್ರ ಮಹಿಳಾ ಮಂಡಲದ ಪಕ್ಷಿ ನೋಟ ವಿವರಿಸಿದರು.
ಗೌರವಾಧ್ಯಕ್ಷೆ ಶಾಂತ ಬಂಗೇರ ಸ್ವಾಗತಿಸಿ, ಕಾರ್ಯದರ್ಶಿ ಆಶಾ ಸತೀಶ್ ವಂದಿಸಿ, ಹೇಮಾವತಿ ಕೆ ಬೆಳ್ತಂಗಡಿ ನಿರೂಪಿಸಿದರು.

Related posts

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya
error: Content is protected !!