23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

ನೇಲ್ಯಡ್ಕ : ಸೇವಾಭಾರತಿ, ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್‌ ತರಬೇತಿ ಶಿಬಿರದ ಉದ್ಘಾಟನೆ ಏ 27 ರಂದು ನೇಲ್ಯಡ್ಕದಲ್ಲಿ ನಡೆಯಿತು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಕೌಶಲ್ಯ NRLM ಮೇಲ್ವಿಚಾರಕರು ಶ್ರೀಮತಿ ವೀಣಾಶ್ರೀ ಕೆ ಕೆ ಚಾಲನೆ ನೀಡಿ, ಭಾಗವಹಿಸಿದ ಮಹಿಳೆಯರಿಗೆ ಶುಭಹಾರೈಸಿದರು. ಈ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ ಮಹತ್ವದ ಹೆಜ್ಜೆಯಾಗಿದೆ ಎಂದರು.

ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷರಾದ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ಸಿಇಒ ಸ್ವರ್ಣಗೌರಿ ಮಾತನಾಡಿ, ಟೈಲರಿಂಗ್ ಕಲಿಕೆ ಅನೇಕ ಉದ್ಯೋಗದ ಅವಕಾಶಗಳನ್ನು ಒದಗಿಸಬಲ್ಲದು. “ದೀಪ ಜ್ಯೋತಿ ಹೇಗೆ ಬೆಳಗುತ್ತದೋ, ಹಾಗೆಯೇ ನೀವು ಈ ವಿದ್ಯೆಯನ್ನು ಉಪಯೋಗಿಸಿ ಸಮಾಜದಲ್ಲಿ ಬೆಳಗಬೇಕು” ಎಂದು ಶುಭ ಹಾರೈಸಿದರು.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ, ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಪ್ರತಿಮಾ, ನೇಲ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಶ್ರೀಮತಿ ವಸಂತಿ ಕೆ, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಖಜಾಂಚಿ ಶ್ರೀಮತಿ ಬಬಿತಾ, ಟೈಲರಿಂಗ್ ತರಬೇತುದಾರರು ಶ್ರೀಮತಿ ಹರಿಣಾಕ್ಷಿ ಬಿ.ಪಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇಲ್ಯಡ್ಕ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಭವಾನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 27 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದು, ಮಹಿಳಾ ಸಬಲಿಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಕೃಷಿ ಉದ್ಯೋಗ ಸಖಿ ಗೀತಾ, ಪಶು ಸಖಿ ವೇದಾವತಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ಅಮಿತ ಪ್ರಾರ್ಥನೆಯನ್ನು ಮಾಡಿ, ಕಾರ್ಯಕ್ರಮದಲ್ಲಿ ಮುಖ್ಯ ಪುಸ್ತಕ ಬರಹಗಾರರು ಶ್ರೀಮತಿ ನೀತಾ ಸ್ವಾಗತಿಸಿ, ಸೇವಾಭಾರತಿಯ ಡಾಕ್ಯುಮೆಂಟೇಶನ್, ಮೋನಿಟರಿಂಗ್ ಮತ್ತು ಕೋ – ಆರ್ಡಿನೇಟರ್ ಸುಮ ನಿರೂಪಿಸಿ. ಸ್ಥಳೀಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಹೇಮಲತಾ ಧನ್ಯವಾದವಿತ್ತರು.

Related posts

ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವ-2026: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya
error: Content is protected !!