September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

ಕಳಿಯ : ಇಲ್ಲಿಯ ಹನುಮಾನ್ ನಗರ ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿಯ 6ನೇ ವರ್ಷದ ವಾರ್ಷಿಕೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಎ.27 ರಂದು ನಡೆಯಿತು.
ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೆಲ್ಲಿಕಟ್ಟೆ, ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನ ಮಂಡಳಿ, ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ ಹಾಗೂ ಮಧ್ಯಾಹ್ನ ಮಹಾ ಪೂಜೆ ಜರುಗಿತು.
ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಲೋಹಿತಾಶ್ವ ಗೌಡ ವಾರ್ಷಿಕ ವರದಿ ಮಂಡಿಸಿದರು.


ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಸಹಾಯಕ ಪ್ರಾಚಾರ್ಯರಾದ ಡಾ.ರವಿ ಎಂ.ಎನ್.ಮಂಡ್ಯ ಧಾರ್ಮಿಕ ಉಪನ್ಯಾಸ ನೀಡಿದರು.
ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ., ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಭಜನಾ ಮಂಡಳಿ ಗೌರವಾಧ್ಯಕ್ಷ ಚೆನ್ನಪ್ಪ ಗೌಡ ಹೀರ್ಯ,ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ತುಕರಾಮ ಪೂಜಾರಿ ,ವಾಯುಸೇನೆ ಸೈನಿಕ ಪ್ರಮೋದ್ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಂಬಳದಡ್ಡ ದಿ.ರಮಾನಂದ ಪೂಜಾರಿ ಮತ್ತು ದಿ.ಸೀತಮ್ಮ, ಸ್ಮರಣಾರ್ಥ ಮರದ ದೇವರ ದೀಪದ ಮಂಟಪವನ್ನು ಮಕ್ಕಳು‌ ಭಜನಾ ಮಂಡಳಿಗೆ ಕೊಡುಗೆಯಾಗಿ ನೀಡಿದರು.
‍ಭಜನಾ ಮಂಡಳಿ ಉಪಾಧ್ಯಕ್ಷ ಯಶೋಧರ ಗೌಡ, ಕೋಶಾಧಿಕಾರಿ ದೀಕ್ಷಿತ್, ಸಂಚಾಲಕ ಯೋಗೀಶ್ ಗೌಡ, ಸದಸ್ಯರು ಹಾಗೂ ಭಕ್ತರು ಮತ್ತಿತರರಿದ್ದರು.
ಡಾಕಯ್ಯ ಗೌಡ ಹೀರ್ಯ ನಿರೂಪಿಸಿ, ಮಂಡಳಿ ಅರ್ಚಕ ಜಗದೀಶ್ ಗೌಡ ವಂದಿಸಿದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya
error: Content is protected !!