April 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

ಕೊರಿಂಜ: ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾ ಭವನದಲ್ಲಿ ಯೋಗ ತರಬೇತಿ ನಡೆಸುವ ಬಗ್ಗೆ ಪೂರ್ವ ಭಾವಿ ಸಭೆಯು ಎ.27 ರಂದು ನಡೆಯಿತು.

ಗುರುದೇವ ಶ್ರೀ ರವಿಶಂಕರ ಜಿ. ಯವರ ಸುದರ್ಶನ ಕ್ರಿಯೆಯ ಬಗ್ಗೆ ಭೌತಿಕ ಕ್ರಿಯೆಯ ಪ್ರಯೋಜನ ದ ಬಗ್ಗೆ ಅವರ ಶಿಷ್ಯೆ ಕಲಾ ಕಾಸರಗೋಡು ಇವರು ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಮಾತನಾಡಿ ಮೇ 13 ರಿಂದ 20 ರವರಗೆ ಸಂಜೆ 6ರಿಂದ 8.30 ತನಕ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯುವ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ವೃದ್ಧಿಸುವ ಪ್ರಯೋಜನ ಪಡೆದುಕೊಳ್ಳಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಧ.ಗ್ರಾ. ಯೋಜನೆಯ ನಿವೃತ್ತ ಮೇಲ್ವಿಚಾರಕಿ ಶ್ರೀಮತಿ ವಾರಿಜ ವಿ. ಶೆಟ್ಟಿ ಕೊರಿಂಜ ಉಪಸ್ಥಿತರಿದ್ದರು.

ಉರುವಾಲು ವಿಭಾಗದ ಸೇವಾಪ್ರತಿನಿಧಿ ಸೀತಾರಾಮ ಆಳ್ವ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವಿ.ಸೂ: ಯೋಗ ಶಿಬಿರದಲ್ಲಿ ಭಾಗವಹಿಸುವವರು ದೂರವಾಣಿ ಸಂಖ್ಯೆ 9448061006 ಸಂಪರ್ಕಿಸಿ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya
error: Content is protected !!