23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

ಬೆಳ್ತಂಗಡಿ: ಸಾಮಾಜಿಕ ಸೇವೆಯಲ್ಲಿ ಸದಾಮುಂದಿರುವ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 554 ಸೇವಯೋಜನೆಯಾಗಿ ಮೇಲಂತಬೆಟ್ಟು ಕಬ್ಬಿಣಹಿತ್ತಿಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ನೇತ್ರಾವತಿ ಎಂಬುವರು 4 ತಿಂಗಳ ಹಿಂದೆ ಬೆನ್ನಿಗೆ ಮರ ಬಿದ್ದ ಕಾರಣ ಗಂಭೀರವಾದ ಆರೋಗ್ಯ ಸಮಸ್ಯೆಯು ಉಂಟಾಗಿ ವೈದ್ಯಕೀಯ ತಪಾಸಣೆಗಳು ಮತ್ತು ಚಿಕಿತ್ಸೆಗಾಗಿ ಹೆಚ್ಚಿನ ವೆಚ್ಚವಾಗುತ್ತಿರುವ ಹಿನ್ನೆಲೆಯಲ್ಲಿ, ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇವರಿಗೆ ರಾಜಕೇಸರಿ ಟ್ರಸ್ಟ್ ವತಿಯಿಂದ 25 ಕೆಜಿ ಅಕ್ಕಿ ಮತ್ತು ದಿನ ಸಾಮಾಗ್ರಿಗಳೊಂದಿಗೆ ಮತ್ತು ವೈದ್ಯಕೀಯ ತಪಾಸಣೆಗಾಗಿ 4000 ಕಿರು ಸಹಾಯವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ವಿನೋದ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ , ಸಂಘಟನಾ ಪ್ರಮುಖರಾದ ಸತೀಶ್ ಗೌಡ ಕಂಗಿತ್ತಿಲ್ಲ, ಸಹ ಸಂಚಾಲಕರಾದ ಶರತ್ ಕರಾಯ, ನಿಕಟಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ, ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರು ಮತ್ತು ಜೆ ಸಿ ಐ ಭಾರತದ ವಲಯ ತರಬೇತುದಾರರಾದ ಶಂಕರ್ ರಾವ್ ಉಪಸ್ಥಿತರಿದ್ದರು.

Related posts

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya
error: Content is protected !!