September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

ಬೆಳ್ತಂಗಡಿ: ಸಾಮಾಜಿಕ ಸೇವೆಯಲ್ಲಿ ಸದಾಮುಂದಿರುವ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 554 ಸೇವಯೋಜನೆಯಾಗಿ ಮೇಲಂತಬೆಟ್ಟು ಕಬ್ಬಿಣಹಿತ್ತಿಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ನೇತ್ರಾವತಿ ಎಂಬುವರು 4 ತಿಂಗಳ ಹಿಂದೆ ಬೆನ್ನಿಗೆ ಮರ ಬಿದ್ದ ಕಾರಣ ಗಂಭೀರವಾದ ಆರೋಗ್ಯ ಸಮಸ್ಯೆಯು ಉಂಟಾಗಿ ವೈದ್ಯಕೀಯ ತಪಾಸಣೆಗಳು ಮತ್ತು ಚಿಕಿತ್ಸೆಗಾಗಿ ಹೆಚ್ಚಿನ ವೆಚ್ಚವಾಗುತ್ತಿರುವ ಹಿನ್ನೆಲೆಯಲ್ಲಿ, ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇವರಿಗೆ ರಾಜಕೇಸರಿ ಟ್ರಸ್ಟ್ ವತಿಯಿಂದ 25 ಕೆಜಿ ಅಕ್ಕಿ ಮತ್ತು ದಿನ ಸಾಮಾಗ್ರಿಗಳೊಂದಿಗೆ ಮತ್ತು ವೈದ್ಯಕೀಯ ತಪಾಸಣೆಗಾಗಿ 4000 ಕಿರು ಸಹಾಯವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ವಿನೋದ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ , ಸಂಘಟನಾ ಪ್ರಮುಖರಾದ ಸತೀಶ್ ಗೌಡ ಕಂಗಿತ್ತಿಲ್ಲ, ಸಹ ಸಂಚಾಲಕರಾದ ಶರತ್ ಕರಾಯ, ನಿಕಟಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ, ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರು ಮತ್ತು ಜೆ ಸಿ ಐ ಭಾರತದ ವಲಯ ತರಬೇತುದಾರರಾದ ಶಂಕರ್ ರಾವ್ ಉಪಸ್ಥಿತರಿದ್ದರು.

Related posts

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya
error: Content is protected !!