25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

ಬೆಳ್ತಂಗಡಿ : ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿ ಪ್ರಮುಖರ ಸಭೆಯು ಬಿಎಂಎಸ್ ತಾಲೂಕು ಸಮಿತಿ ಅಧ್ಯಕ್ಷ ಉದಯ ಬಿ ಕೆ ಇವರ ಅಧ್ಯಕ್ಷತೆಯಲ್ಲಿ ಭಾರತೀಯ ಮಜ್ದೂರ್ ಸಂಘದ ಕಚೇರಿ ವಠಾರದಲ್ಲಿ ನಡೆಸಲಾಯಿತು.

ಈ ಸಭೆಯಲ್ಲಿ ಇತ್ತೀಚೆಗೆ ಮೃತರಾದ ಭಾರತೀಯ ಮಜ್ದೂರ್ ಸಂಘದ ಪೂರ್ಣಾವಧಿ ಕಾರ್ಯಕರ್ತರು ಹಾಗೂ ಹಿರಿಯ ನಾಯಕರಾದ ಡಿ.ಕೆ ಸದಾಶಿವ ಅವರಿಗೆ ಹಾಗೂ ಕಾಶ್ಮೀರದ ಪೆಹಲ್ ಗಾಮ್ ನಲ್ಲಿ ಭಯೋತ್ಪಾದಕರ ದಾಳಿಗೆ ತುತ್ತಾದ 26 ಜನ ಭಾರತೀಯರ ಸಾವಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಯನ್ನು ಸಮರ್ಪಿಸಲಾಯತು ಮತ್ತು ಪ್ರಸ್ತುತ ಸರಕಾರ ಹೊಸ ನಿಯಮದಿಂದ ಕಾರ್ಮಿಕರಿಗೆ ಬಹಳಷ್ಟು ತೊಂದರೆ ಆಗುತ್ತಿದ್ದೂ ಈ ಬಗ್ಗೆ ಸರಕಾರದ ವಿರುದ್ಧ ಪ್ರತಿಭಟನೆ ಸಭೆಯನ್ನು ಮಾಡುವುದೆಂದು ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ದ.ಕ. ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಮಜ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್, ಉದಯ್ ಅಚಾರ್ಯ ಉಜಿರೆ, ಬಿಎಂಎಸ್ ಕೊಕ್ಕಡ ವಲಯದ ಸಂಚಾಲಕರಾದ ಚಂದ್ರಶೇಖರ್ ಗಾನಗಿರಿ ಹಾಗೂ ತಾಲೂಕಿನ ವಿವಿಧ ಗ್ರಾಮದ ಬಿಎಂಎಸ್ ನ ಅಧ್ಯಕ್ಷರು, ಕಾರ್ಯದರ್ಶಿ ಉಪಸ್ಥಿತರಿದ್ದರು. ಕುಮಾರ್ ನಾಥ್ ಸ್ವಾಗತಿಸಿ ಜಯರಾಜ ಸಾಲಿಯಾನ್ ವಂದಿಸಿದರು.

Related posts

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

Suddi Udaya
error: Content is protected !!