September 6, 2026
Uncategorized

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

ಗುರುವಾಯನಕೆರೆ : ಇಲ್ಲಿಯ ಬಸ್ ನಿಲ್ದಾಣ ಬಳಿಯ ನಿವಾಸಿ ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಇಂದು ಸಂಜೆ ಸಿಡಿಲು ಬಡಿದ ಘಟನೆ ನಡೆದಿದೆ.

ಇಂದು ಸಂಜೆ ಬೆಳ್ತಂಗಡಿ, ಗುರುವಾಯನಕೆರೆ ಪ್ರದೇಶದಲ್ಲಿ
ಭೀಕರವಾಗಿ ಸಿಡಿಲು ಮಳೆ ಬಂದಿದ್ದು, ಗುರುವಾಯನಕೆರೆ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಸಿಡಿಲು

ಬಡಿದು ಮರದಲ್ಲಿ ಬೆಂಕಿ ಕಾಣಿಸಿಕೊಂಡು ತೆಂಗಿನ ಮರ ಹೊತ್ತಿ ಉರಿದಿದೆ. ಸಿಡಿಲು ಬಡಿದಾಗ ಮನೆಯಲ್ಲಿ ಹರಿಯಪ್ಪ ಅವರ ಮಕ್ಕಳು ಇದ್ದರು. ಮನೆಯ ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ.

Related posts

ನಾರಾವಿ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಕ್ತಿ: ಉಚಿತ ಪುಸ್ತಕ ವಿತರಣೆ ದೇವಾಲಯ ಮತ್ತು ಶಾಲೆ ಊರಿಗೆ ಕಲಶವಿದ್ದಂತೆ: ಶಾಸಕ ಪೂಂಜ

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ:ನೂತನ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ:ಸೇವೆ ಸಲ್ಲಿಸಿದ್ದ ಗುರುಗಳಿಗೆ ಗುರು ವಂದನೆ – ಆಕಷ೯ಕ ಮೆರವಣಿಗೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya
error: Content is protected !!