23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

ಬೆಳ್ತಂಗಡಿ : ಲಾಯಿಲ ಟಿ.ಬಿ ಕ್ರಾಸ್ ಬಳಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಟಿ.ಬಿ ಕ್ರಾಸ್ ಹಳೆಪೇಟೆ ನಿವಾಸಿ ವರದರಾಜ ಹೆಗ್ಡೆ ಎಂಬವರ ಮನೆಯ ಅಂಗಳದಿಂದಲೇ ಬೈಕ್ ಕಳ್ಳತನವಾಗಿದೆ. ವರದರಾಜ ಹೆಗ್ಡೆ ಅವರು ಸೇಲ್ಸ್ ಮ್ಯಾ‌ನ್ ಕೆಲಸ ಮಾಡಿಕೊಂಡಿದ್ದು ಏ.25ರಂದು ಕೆಲಸ ಮುಗಿಸಿ ಬಂದು ರಾತ್ರಿಯ ವೇಳೆ ಮನೆಯ ಹೊರಗೆ ಶೆಡ್ ನಲ್ಲಿ ತನ್ನ ಕೆ.ಎ 70 E 1651ನಂಬರಿನ ಸುಜುಕಿ ಕಂಪೆನಿಯ ಮೋಟಾರ್ ಸೈಕಲ್ ಅನ್ನು ನಿಲ್ಲಿಸಿದ್ದರು. ಏ.26ರಂದು ಬೆಳಗ್ಗೆ ಎದ್ದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ನೆರಕರೆಯಲ್ಲಿ ಹುಡುಕಾಡಿದರೂ ಬೈಕ್ ಪತ್ತೆಯಾಗದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರಿಗೆ ಏ.26 ರಂದು ದೂರು ನೀಡಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ಗುರುವಾಯನಕೆರೆ ವೈಭವ್ ಹಾರ್ಡ್ ವೇರ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ಮಡಂತ್ಯಾರು: ರಚನಾ ಸಿಲ್ಕ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya
error: Content is protected !!