25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

ವೇಣೂರು: ಶ್ರೀ ವಿಶ್ವಕರ್ಮ ಸೇವಾ ಸಂಘ ವೇಣೂರು ಹಾಗೂ ಕಾಳಿಕಾಂಬ ಮಹಿಳಾ ಮಂಡಳಿ ವೇಣೂರು ಇದರ 33 ನೇ ವರ್ಷದ ಮಹಾ ಸಭೆ ಹಾಗೂ ವಿಶ್ವಕರ್ಮ ಪೂಜೆಯು ಎ.27 ರಂದು ಜರಗಿತು.

ವಾರ್ಷಿಕ ಸಭಾ ಕಾರ್ಯಕ್ರಮದಲ್ಲಿ ಮೂಡುಬಿದ್ರಿ ಶ್ರೀ ಗುರುಮಠ ಕಾಳಿಕಾಂಬ ದೇವಸ್ಥಾನ ಆಡಳಿತ ಮುಖ್ಯಸ್ಥ ಎಂ.ಕೆ ಬಾಲಕೃಷ್ಣ ಆಚಾರ್ಯ ಉಳಿಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿ ವೇಣೂರಿನ ಸಮಸ್ತ ವಿಶ್ವಕರ್ಮ ಬಂಧುಗಳ ಪರಿಶ್ರಮಕ್ಕೆ ಇನ್ನು ಮುಂದೆ ಈ ಕಟ್ಟಡವು ಆದಷ್ಟು ಬೇಗ ಸಭಾಂಗಣವಾಗಿ ನಿರ್ಮಾಣವಾಗಲಿ ಎಂದು ಶುಭ ಹಾರೈಸಿದರು.

ಸದಾನಂದ ಆಚಾರ್ಯ ಯಕ್ಷ ತೀರ್ಥ ಕಲಾ ಸೇವೆ ನೂರಾಳ್ ಬೆಟ್ಟು ಇವರು ಮುಖ್ಯ ಅತಿಥಿಗಳಾಗಿ ಮಾತನಾಡಿ ನಮ್ಮ ಸಮಾಜದ ಬಂಧುಗಳು ಆಚಾರ ಹಾಗೂ ವಿಚಾರಗಳಲ್ಲಿ ನಮ್ಮ ಸಮಾಜದ ಘನತೆ ಗೌರವವನ್ನು ಉಳಿಸಿದರೆ ನಾವು ನಂಬಿದ ದೇವರು ನಮ್ಮನ್ನು ಕೈ ಬಿಡುವುದಿಲ್ಲ ಎಂದು ಸಲಹೆ ನೀಡಿದರು. ಹಾಗೆಯೇ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಕೈರೋಳಿ ಸತೀಶ್ ಆಚಾರ್ಯರವರು ಆಯ್ಕೆಯಾದರು. ಅಭ್ಯಾಗತರನ್ನು ಸಭೆಯ ಗೌರವ ಅಧ್ಯಕ್ಷ ಖಂಡಿಗ ಶ್ರೀಧರ ಆಚಾರ್ಯರವರು ಹಾಗೂ ಅಧ್ಯಕ್ಷ ರವೀಂದ್ರ ಆಚಾರ್ಯರವರು ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಸಂಘದ ಉಪಾಧ್ಯಕ್ಷ ಸೀತಾರಾಮ ಆಚಾರ್ಯ ಸ್ವಾಗತಿಸಿ ಪ್ರಸ್ತಾವನೆ ಗೈದರು. ಜೊತೆ ಕಾರ್ಯದರ್ಶಿ ಬಿ ಹರಿಶ್ಚಂದ್ರ ಆಚಾರ್ಯ ಲೆಕ್ಕಪತ್ರ ಮಂಡಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ನೂತನ ಅಧ್ಯಕ್ಷ ಸತೀಶ್ ಆಚಾರ್ಯಧನ್ಯವಾದವಿತ್ತರು.

Related posts

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ

Suddi Udaya

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya
error: Content is protected !!