23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ



ಶಿಶಿಲ : ಹನುಮಂತ ಸ್ವಾಮಿ ಭಕ್ತಿಗೆ ಆದರ್ಶ. ಆತ ಅತೀ ಧೈರ್ಯವಂತ. ಯಾವುದೇ ಕಾರ್ಯ ಸಾಧಿಸಬೇಕಾದಲ್ಲಿ ಅದನ್ನು ಸಾಧಿಸುವಂತ ಪರಾಕ್ರಮಿ. ಶ್ರೀರಾಮನ ಸೇವಕ. ದುಷ್ಟ ಶಕ್ತಿಗಳನ್ನು ನಿಗ್ರಹಿಸಿದ ವೀರ ಪುರುಷ. ಆತನ ಆರಾಧನೆ ಪರಿಣಾಮ ನಮಗೂ ರಾಷ್ಟ್ರಕ್ಕೂ ಶಕ್ತಿ ತುಂಬಲಿ ಎಂದು ಶ್ರೀ ಅರಿಕೆಗುಡ್ದೆ ವನದುರ್ಗಾ ದೇವಾಲಯ ಅಧ್ಯಕ್ಷ ಪ್ರಕಾಶ‌ ಪಿಲಿಕಬೆ ತಿಳಿಸಿದ್ದರು.

ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ ನಡೆದ ಶ್ರೀ ಆಂಜನೇಯ ಜಯಂತಿ ಕಾರ್ಯಕಾರ್ಯಕ್ರಮ ಉದ್ಘಾಟನೆ ಮಾಡಿ ಶುಭ ಹಾರೈಸಿದರು.


ಮುಖ್ಯ ಅತಿಥಿಯಾಗಿ ಜೀವ ವಿಮಾ ಬೆಳ್ತಂಗಡಿ ಅಧಿಕಾರಿ ಉದಯಶಂಕರ ಅರಸಿನಮಕ್ಕಿ ಮಾತನಾಡಿ ಹನುಮನ ಶಕ್ತಿ ಎಲ್ಲಾ ಭಾರತೀಯ ಪ್ರಜೆಗೂ ಬರಲಿ. ಅವರ ಆದರ್ಶ ಮೈಗೂಡಿಸಿಕೊಂಡು ಬರುವಾ ಎಂದು ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಕಾಸರಗೋಡು ಹಿರಿಯ ಭಜನಾ ಪಟು ಹರಿದಾಸ ಜಯಾನಂದ ಕಾಸರಗೋಡು ‌ಮತ್ತು ಭಜನಾ ಸಾಧಕ ಬಾಲಕೃಷ್ಣ ಪಂಜ ಅವರನ್ನು ಮನೆಯ ಪರವಾಗಿ ಜಯರಾಮ ನೆಲ್ಲಿತ್ತಾಯ ಮತ್ತು ಶ್ರೀ ಮತಿ ರೇಖಾ ಜಯರಾಮ ನೆಲ್ಲಿತ್ತಾಯ ಅಭಿನಂದನೆ ‌ಮಾಡಿದರು.


ರಾಘವೇಂದ್ರ ಕಿಗ್ಗ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಭಜನಾ ಮಂಡಳಿಯ ಭಜಕರು ಭಾಗವಹಿಸಿ ಆಕರ್ಷಕ ಕುಣಿತ ಭಜನೆ ನೆರವೇರಿಸಿದರು.
ಬಿಳಿನೆಲೆ ಭಜನಾ‌ ಮಂಡಳಿಯ ಸುಂದರ ಮತ್ತು ತಂಡದವರಿಂದ ಮತ್ತು ಹರಿದಾಸ ಕಾಸರಗೋಡು ಜಯಾನಂದ ಅವರ ತಂಡ ಭಜನಾ ಕಾರ್ಯಕ್ರಮ ನಡೆಸಿದ್ದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ , ಪುತ್ತೂರು, ಕಾಸರಗೋಡು ವಿವಿಧ ಭಜನಾ ತಂಡದವರು ಭಾಗವಹಿಸಿದ್ದರು.
ಭಾಗವಹಿಸಿದ ಎಲ್ಲರಿಗೂ ಶಿವಕೀರ್ತಿ ನಿಲಯದ ಜಯರಾಮ ನೆಲ್ಲಿತ್ತಾಯ ದಂಪತಿಗಳು ಮನೆಯವರೂ ಎಲ್ಲರೂ ಅಭಿನಂದನೆ ತಿಳಿಸಿದ್ದರು.

Related posts

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಬೆಳ್ತಂಗಡಿ ಎಸ್‌ ಡಿ ಎಮ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ / ಚರಣ/ಗರಿ ಪರೀಕ್ಷೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya
error: Content is protected !!