July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ



ಶಿಶಿಲ : ಹನುಮಂತ ಸ್ವಾಮಿ ಭಕ್ತಿಗೆ ಆದರ್ಶ. ಆತ ಅತೀ ಧೈರ್ಯವಂತ. ಯಾವುದೇ ಕಾರ್ಯ ಸಾಧಿಸಬೇಕಾದಲ್ಲಿ ಅದನ್ನು ಸಾಧಿಸುವಂತ ಪರಾಕ್ರಮಿ. ಶ್ರೀರಾಮನ ಸೇವಕ. ದುಷ್ಟ ಶಕ್ತಿಗಳನ್ನು ನಿಗ್ರಹಿಸಿದ ವೀರ ಪುರುಷ. ಆತನ ಆರಾಧನೆ ಪರಿಣಾಮ ನಮಗೂ ರಾಷ್ಟ್ರಕ್ಕೂ ಶಕ್ತಿ ತುಂಬಲಿ ಎಂದು ಶ್ರೀ ಅರಿಕೆಗುಡ್ದೆ ವನದುರ್ಗಾ ದೇವಾಲಯ ಅಧ್ಯಕ್ಷ ಪ್ರಕಾಶ‌ ಪಿಲಿಕಬೆ ತಿಳಿಸಿದ್ದರು.

ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ ನಡೆದ ಶ್ರೀ ಆಂಜನೇಯ ಜಯಂತಿ ಕಾರ್ಯಕಾರ್ಯಕ್ರಮ ಉದ್ಘಾಟನೆ ಮಾಡಿ ಶುಭ ಹಾರೈಸಿದರು.


ಮುಖ್ಯ ಅತಿಥಿಯಾಗಿ ಜೀವ ವಿಮಾ ಬೆಳ್ತಂಗಡಿ ಅಧಿಕಾರಿ ಉದಯಶಂಕರ ಅರಸಿನಮಕ್ಕಿ ಮಾತನಾಡಿ ಹನುಮನ ಶಕ್ತಿ ಎಲ್ಲಾ ಭಾರತೀಯ ಪ್ರಜೆಗೂ ಬರಲಿ. ಅವರ ಆದರ್ಶ ಮೈಗೂಡಿಸಿಕೊಂಡು ಬರುವಾ ಎಂದು ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಕಾಸರಗೋಡು ಹಿರಿಯ ಭಜನಾ ಪಟು ಹರಿದಾಸ ಜಯಾನಂದ ಕಾಸರಗೋಡು ‌ಮತ್ತು ಭಜನಾ ಸಾಧಕ ಬಾಲಕೃಷ್ಣ ಪಂಜ ಅವರನ್ನು ಮನೆಯ ಪರವಾಗಿ ಜಯರಾಮ ನೆಲ್ಲಿತ್ತಾಯ ಮತ್ತು ಶ್ರೀ ಮತಿ ರೇಖಾ ಜಯರಾಮ ನೆಲ್ಲಿತ್ತಾಯ ಅಭಿನಂದನೆ ‌ಮಾಡಿದರು.


ರಾಘವೇಂದ್ರ ಕಿಗ್ಗ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಭಜನಾ ಮಂಡಳಿಯ ಭಜಕರು ಭಾಗವಹಿಸಿ ಆಕರ್ಷಕ ಕುಣಿತ ಭಜನೆ ನೆರವೇರಿಸಿದರು.
ಬಿಳಿನೆಲೆ ಭಜನಾ‌ ಮಂಡಳಿಯ ಸುಂದರ ಮತ್ತು ತಂಡದವರಿಂದ ಮತ್ತು ಹರಿದಾಸ ಕಾಸರಗೋಡು ಜಯಾನಂದ ಅವರ ತಂಡ ಭಜನಾ ಕಾರ್ಯಕ್ರಮ ನಡೆಸಿದ್ದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ , ಪುತ್ತೂರು, ಕಾಸರಗೋಡು ವಿವಿಧ ಭಜನಾ ತಂಡದವರು ಭಾಗವಹಿಸಿದ್ದರು.
ಭಾಗವಹಿಸಿದ ಎಲ್ಲರಿಗೂ ಶಿವಕೀರ್ತಿ ನಿಲಯದ ಜಯರಾಮ ನೆಲ್ಲಿತ್ತಾಯ ದಂಪತಿಗಳು ಮನೆಯವರೂ ಎಲ್ಲರೂ ಅಭಿನಂದನೆ ತಿಳಿಸಿದ್ದರು.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ,ಸಾಧಕ ರೈತರಿಗೆ,ವಿಧ್ಯಾರ್ಥಿಗಳಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ : 455.79 ಕೋಟಿ ವ್ಯವಹಾರ,ರೂ1.62 ಕೋಟಿ ಲಾಭ,ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ: ಸಹಕಾರಿಗಳಿಗೆ ಅನುಕೂಲವಾಗುವಂತೆ ಪಡಿತರವನ್ನು ರಾತ್ರಿಯವರೆಗೆ ವಿತರಣೆ :ಜೋಯೆಲ್ ಮೆಂಡೋನ್ಸ

Suddi Udaya

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ : ನಾಯಕತ್ವ ಭವಿಷ್ಯದ ಜೀವನಕ್ಕೆ ಬುನಾದಿ: ಸಿ.ಕೆ. ರೋಹಿಣಿ

Suddi Udaya

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!