September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎಸ್ ಎಸ್ ನೇಷನಲ್ ಡಿಫೆನ್ಸ್ ಅಕಾಡೆಮಿ ಅಕಾಡೆಮಿ ನಡೆಸುವ ಎನ್ ಡಿ ಎ ಲಿಖಿತ ಪರೀಕ್ಷೆಯಲ್ಲಿ – ಹತ್ತು ಲಕ್ಷ ವಿದ್ಯಾರ್ಥಿಗಳ ಪೈಕಿ ಅಂತಿಮ ಸುತ್ತಿಗೆ ಆಯ್ಕೆಯಾದ ದೇಶದ ಕೆಲವೇ ವಿದ್ಯಾರ್ಥಿಗಳ ಪೈಕಿ ವಿವೇಕ್ ಎಸ್ ಎಸ್ ಒಬ್ಬನಾಗಿದ್ದಾರೆ.

ಎಕ್ಸೆಲ್ ನಲ್ಲಿ , ರಾಷ್ಟ್ರ ಸೇವೆ ಮಾಡಲು ಮತ್ತು ರಾಷ್ಟ್ರ ಸೇನಾ ವಿಚಾರದಲ್ಲಿ ವಿಶೇಷ ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ಈ ವರ್ಷದಿಂದ ಪ್ರತ್ಯೇಕ ಬ್ಯಾಚ್ ಮಾಡಿ, ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ವಿಕ್ರಾಂತ್ ಎಂಬ ಹೆಸರಿನ ಎನ್ ಡಿ ಎ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ದೈಹಿಕ ತರಬೇತಿಯೊಂದಿಗೆ, ಎಸ್ ಎಸ್ ಬಿ ಸಂದರ್ಶನ ಎದುರಿಸುವ ಕುರಿತಾಗಿ ಕೂಡಾ ವಿಶೇಷ ತರಬೇತಿ ನೀಡಲಾಗುತ್ತಿದೆ.

ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಜೋಸ್ಟಮ್ ಎ ಟಿ ಅವರು ಅಭಿನಂದಿಸಿದ್ದಾರೆ.

Related posts

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya
error: Content is protected !!