July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎಸ್ ಎಸ್ ನೇಷನಲ್ ಡಿಫೆನ್ಸ್ ಅಕಾಡೆಮಿ ಅಕಾಡೆಮಿ ನಡೆಸುವ ಎನ್ ಡಿ ಎ ಲಿಖಿತ ಪರೀಕ್ಷೆಯಲ್ಲಿ – ಹತ್ತು ಲಕ್ಷ ವಿದ್ಯಾರ್ಥಿಗಳ ಪೈಕಿ ಅಂತಿಮ ಸುತ್ತಿಗೆ ಆಯ್ಕೆಯಾದ ದೇಶದ ಕೆಲವೇ ವಿದ್ಯಾರ್ಥಿಗಳ ಪೈಕಿ ವಿವೇಕ್ ಎಸ್ ಎಸ್ ಒಬ್ಬನಾಗಿದ್ದಾರೆ.

ಎಕ್ಸೆಲ್ ನಲ್ಲಿ , ರಾಷ್ಟ್ರ ಸೇವೆ ಮಾಡಲು ಮತ್ತು ರಾಷ್ಟ್ರ ಸೇನಾ ವಿಚಾರದಲ್ಲಿ ವಿಶೇಷ ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ಈ ವರ್ಷದಿಂದ ಪ್ರತ್ಯೇಕ ಬ್ಯಾಚ್ ಮಾಡಿ, ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ವಿಕ್ರಾಂತ್ ಎಂಬ ಹೆಸರಿನ ಎನ್ ಡಿ ಎ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ದೈಹಿಕ ತರಬೇತಿಯೊಂದಿಗೆ, ಎಸ್ ಎಸ್ ಬಿ ಸಂದರ್ಶನ ಎದುರಿಸುವ ಕುರಿತಾಗಿ ಕೂಡಾ ವಿಶೇಷ ತರಬೇತಿ ನೀಡಲಾಗುತ್ತಿದೆ.

ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಜೋಸ್ಟಮ್ ಎ ಟಿ ಅವರು ಅಭಿನಂದಿಸಿದ್ದಾರೆ.

Related posts

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪೆರಿಂಜೆ ಎಸ್‌ಡಿಎಂ ಅನುದಾನಿತ ಪ್ರೌಢಶಾಲೆಗೆ ಶೇ.96 ಫಲಿತಾಂಶ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!