27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

ಬೈಂದೂರು : ಸಮೃದ್ಧ ಬೈಂದೂರು ಪರಿಕಲ್ಪನೆಯ ಸೇವಾ ಸೇತು ಯೋಜನೆಯಡಿಯಲ್ಲಿ ಸೇವಾಭಾರತಿ (ರಿ.)ಕನ್ಯಾಡಿ ಸಹಯೋಗದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನೂತನ ಪುನಶ್ಚೇತನ ಕೇಂದ್ರ ಸೇವಾಧಾಮ ಇದರ ಭೂಮಿ ಪೂಜೆ ಕಾರ್ಯಕ್ರಮ ಏಪ್ರಿಲ್ 28 ರಂದು ಬೈಂದೂರಿನ ಪಡುವರಿ ಗ್ರಾಮದ ಹೇನಬೇರು ಇಲ್ಲಿ ನಡೆಯಿತು.

ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೂಮಿ ಪೂಜೆಯನ್ನು ನೆರವೇರಿಸಿ ಈ ಒಂದು ಕೇಂದ್ರ ಬೈಂದೂರಿನ 37 ಮಂದಿ ದಿವ್ಯಾಂಗರ ಬಾಳಲ್ಲಿ ಆಶಾಕಿರಣವಾಗಲಿ. ರಾಜಕೀಯದ ಜೊತೆ ಜೊತೆಗೆ ಇನ್ನೊಬ್ಬರ ನೋವಿಗೆ ನಾವು ಸ್ಪಂದಿಸುವುದು ಸಹ ಮಹತ್ತರವಾದ ಕೆಲಸವಾಗಿದೆ . ಬೈಂದೂರಿನಲ್ಲಿ ಆಗುವಂತಹ ಈ ಒತ್ತಡ ಗಾಯ ನಿರ್ವಹಣೆ ಮತ್ತು ಪುನಶ್ವೇತನ ಕೇಂದ್ರವನ್ನು ಕರ್ನಾಟಕದಲ್ಲಿ 2ನೇ ಕೇಂದ್ರವನ್ನಾಗಿ ಪ್ರಾರಂಭಿಸಲಿದ್ದೇವೆ ಈ ಒಂದು ಕೆಲಸವನ್ನು ಮಾಡಲು ಬಹಳ ಸಂತೋಷ ಇದೆ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಮೃದ್ಧ ಜನ ಸೇವಾ ಚಾರಿಟೇಬಲ್ ಟ್ರಸ್ಟ್ ನ ಪ್ರಮುಖರಾದ ಬಿಎಸ್ ಸುರೇಶ್ ಶೆಟ್ಟಿ, ಬರವಾಡಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಸುರೇಶ್, ಶಿರೂರು ಹಿರಿಯ ವೈದ್ಯಾಧಿಕಾರಿಗಳು ಡಾ. ಕೆ ಪಿ ನಬಿಯಾರ್, ಬೈಂದೂರು ಆರೋಗ್ಯ ಭಾರತಿ ಉಪಾಧ್ಯಕ್ಷರು ಡಾ. ಎ ಎಸ್ ಉಡುಪ ಸೇವಾಧಾಮ ಸಂಸ್ಥಾಪಕರು ಕೆ ವಿನಾಯಕ ರಾವ್ ಮತ್ತು ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!