September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

ಬೈಂದೂರು : ಸಮೃದ್ಧ ಬೈಂದೂರು ಪರಿಕಲ್ಪನೆಯ ಸೇವಾ ಸೇತು ಯೋಜನೆಯಡಿಯಲ್ಲಿ ಸೇವಾಭಾರತಿ (ರಿ.)ಕನ್ಯಾಡಿ ಸಹಯೋಗದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನೂತನ ಪುನಶ್ಚೇತನ ಕೇಂದ್ರ ಸೇವಾಧಾಮ ಇದರ ಭೂಮಿ ಪೂಜೆ ಕಾರ್ಯಕ್ರಮ ಏಪ್ರಿಲ್ 28 ರಂದು ಬೈಂದೂರಿನ ಪಡುವರಿ ಗ್ರಾಮದ ಹೇನಬೇರು ಇಲ್ಲಿ ನಡೆಯಿತು.

ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೂಮಿ ಪೂಜೆಯನ್ನು ನೆರವೇರಿಸಿ ಈ ಒಂದು ಕೇಂದ್ರ ಬೈಂದೂರಿನ 37 ಮಂದಿ ದಿವ್ಯಾಂಗರ ಬಾಳಲ್ಲಿ ಆಶಾಕಿರಣವಾಗಲಿ. ರಾಜಕೀಯದ ಜೊತೆ ಜೊತೆಗೆ ಇನ್ನೊಬ್ಬರ ನೋವಿಗೆ ನಾವು ಸ್ಪಂದಿಸುವುದು ಸಹ ಮಹತ್ತರವಾದ ಕೆಲಸವಾಗಿದೆ . ಬೈಂದೂರಿನಲ್ಲಿ ಆಗುವಂತಹ ಈ ಒತ್ತಡ ಗಾಯ ನಿರ್ವಹಣೆ ಮತ್ತು ಪುನಶ್ವೇತನ ಕೇಂದ್ರವನ್ನು ಕರ್ನಾಟಕದಲ್ಲಿ 2ನೇ ಕೇಂದ್ರವನ್ನಾಗಿ ಪ್ರಾರಂಭಿಸಲಿದ್ದೇವೆ ಈ ಒಂದು ಕೆಲಸವನ್ನು ಮಾಡಲು ಬಹಳ ಸಂತೋಷ ಇದೆ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಮೃದ್ಧ ಜನ ಸೇವಾ ಚಾರಿಟೇಬಲ್ ಟ್ರಸ್ಟ್ ನ ಪ್ರಮುಖರಾದ ಬಿಎಸ್ ಸುರೇಶ್ ಶೆಟ್ಟಿ, ಬರವಾಡಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಸುರೇಶ್, ಶಿರೂರು ಹಿರಿಯ ವೈದ್ಯಾಧಿಕಾರಿಗಳು ಡಾ. ಕೆ ಪಿ ನಬಿಯಾರ್, ಬೈಂದೂರು ಆರೋಗ್ಯ ಭಾರತಿ ಉಪಾಧ್ಯಕ್ಷರು ಡಾ. ಎ ಎಸ್ ಉಡುಪ ಸೇವಾಧಾಮ ಸಂಸ್ಥಾಪಕರು ಕೆ ವಿನಾಯಕ ರಾವ್ ಮತ್ತು ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಆಚರಣೆ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya

ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು :ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!