July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

ಬೈಂದೂರು : ಸಮೃದ್ಧ ಬೈಂದೂರು ಪರಿಕಲ್ಪನೆಯ ಸೇವಾ ಸೇತು ಯೋಜನೆಯಡಿಯಲ್ಲಿ ಸೇವಾಭಾರತಿ (ರಿ.)ಕನ್ಯಾಡಿ ಸಹಯೋಗದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನೂತನ ಪುನಶ್ಚೇತನ ಕೇಂದ್ರ ಸೇವಾಧಾಮ ಇದರ ಭೂಮಿ ಪೂಜೆ ಕಾರ್ಯಕ್ರಮ ಏಪ್ರಿಲ್ 28 ರಂದು ಬೈಂದೂರಿನ ಪಡುವರಿ ಗ್ರಾಮದ ಹೇನಬೇರು ಇಲ್ಲಿ ನಡೆಯಿತು.

ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೂಮಿ ಪೂಜೆಯನ್ನು ನೆರವೇರಿಸಿ ಈ ಒಂದು ಕೇಂದ್ರ ಬೈಂದೂರಿನ 37 ಮಂದಿ ದಿವ್ಯಾಂಗರ ಬಾಳಲ್ಲಿ ಆಶಾಕಿರಣವಾಗಲಿ. ರಾಜಕೀಯದ ಜೊತೆ ಜೊತೆಗೆ ಇನ್ನೊಬ್ಬರ ನೋವಿಗೆ ನಾವು ಸ್ಪಂದಿಸುವುದು ಸಹ ಮಹತ್ತರವಾದ ಕೆಲಸವಾಗಿದೆ . ಬೈಂದೂರಿನಲ್ಲಿ ಆಗುವಂತಹ ಈ ಒತ್ತಡ ಗಾಯ ನಿರ್ವಹಣೆ ಮತ್ತು ಪುನಶ್ವೇತನ ಕೇಂದ್ರವನ್ನು ಕರ್ನಾಟಕದಲ್ಲಿ 2ನೇ ಕೇಂದ್ರವನ್ನಾಗಿ ಪ್ರಾರಂಭಿಸಲಿದ್ದೇವೆ ಈ ಒಂದು ಕೆಲಸವನ್ನು ಮಾಡಲು ಬಹಳ ಸಂತೋಷ ಇದೆ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಮೃದ್ಧ ಜನ ಸೇವಾ ಚಾರಿಟೇಬಲ್ ಟ್ರಸ್ಟ್ ನ ಪ್ರಮುಖರಾದ ಬಿಎಸ್ ಸುರೇಶ್ ಶೆಟ್ಟಿ, ಬರವಾಡಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಸುರೇಶ್, ಶಿರೂರು ಹಿರಿಯ ವೈದ್ಯಾಧಿಕಾರಿಗಳು ಡಾ. ಕೆ ಪಿ ನಬಿಯಾರ್, ಬೈಂದೂರು ಆರೋಗ್ಯ ಭಾರತಿ ಉಪಾಧ್ಯಕ್ಷರು ಡಾ. ಎ ಎಸ್ ಉಡುಪ ಸೇವಾಧಾಮ ಸಂಸ್ಥಾಪಕರು ಕೆ ವಿನಾಯಕ ರಾವ್ ಮತ್ತು ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya
error: Content is protected !!