25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

ಬೈಂದೂರು : ಸಮೃದ್ಧ ಬೈಂದೂರು ಪರಿಕಲ್ಪನೆಯ ಸೇವಾ ಸೇತು ಯೋಜನೆಯಡಿಯಲ್ಲಿ ಸೇವಾಭಾರತಿ (ರಿ.)ಕನ್ಯಾಡಿ ಸಹಯೋಗದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನೂತನ ಪುನಶ್ಚೇತನ ಕೇಂದ್ರ ಸೇವಾಧಾಮ ಇದರ ಭೂಮಿ ಪೂಜೆ ಕಾರ್ಯಕ್ರಮ ಏಪ್ರಿಲ್ 28 ರಂದು ಬೈಂದೂರಿನ ಪಡುವರಿ ಗ್ರಾಮದ ಹೇನಬೇರು ಇಲ್ಲಿ ನಡೆಯಿತು.

ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೂಮಿ ಪೂಜೆಯನ್ನು ನೆರವೇರಿಸಿ ಈ ಒಂದು ಕೇಂದ್ರ ಬೈಂದೂರಿನ 37 ಮಂದಿ ದಿವ್ಯಾಂಗರ ಬಾಳಲ್ಲಿ ಆಶಾಕಿರಣವಾಗಲಿ. ರಾಜಕೀಯದ ಜೊತೆ ಜೊತೆಗೆ ಇನ್ನೊಬ್ಬರ ನೋವಿಗೆ ನಾವು ಸ್ಪಂದಿಸುವುದು ಸಹ ಮಹತ್ತರವಾದ ಕೆಲಸವಾಗಿದೆ . ಬೈಂದೂರಿನಲ್ಲಿ ಆಗುವಂತಹ ಈ ಒತ್ತಡ ಗಾಯ ನಿರ್ವಹಣೆ ಮತ್ತು ಪುನಶ್ವೇತನ ಕೇಂದ್ರವನ್ನು ಕರ್ನಾಟಕದಲ್ಲಿ 2ನೇ ಕೇಂದ್ರವನ್ನಾಗಿ ಪ್ರಾರಂಭಿಸಲಿದ್ದೇವೆ ಈ ಒಂದು ಕೆಲಸವನ್ನು ಮಾಡಲು ಬಹಳ ಸಂತೋಷ ಇದೆ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಮೃದ್ಧ ಜನ ಸೇವಾ ಚಾರಿಟೇಬಲ್ ಟ್ರಸ್ಟ್ ನ ಪ್ರಮುಖರಾದ ಬಿಎಸ್ ಸುರೇಶ್ ಶೆಟ್ಟಿ, ಬರವಾಡಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಸುರೇಶ್, ಶಿರೂರು ಹಿರಿಯ ವೈದ್ಯಾಧಿಕಾರಿಗಳು ಡಾ. ಕೆ ಪಿ ನಬಿಯಾರ್, ಬೈಂದೂರು ಆರೋಗ್ಯ ಭಾರತಿ ಉಪಾಧ್ಯಕ್ಷರು ಡಾ. ಎ ಎಸ್ ಉಡುಪ ಸೇವಾಧಾಮ ಸಂಸ್ಥಾಪಕರು ಕೆ ವಿನಾಯಕ ರಾವ್ ಮತ್ತು ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

Suddi Udaya
error: Content is protected !!