July 23, 2026
Uncategorized

ಮೇ. 7 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೇ.7 ರಂದು ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ಆಯೋಜಿಸಲಾಗಿದೆ.


ಡಾ. ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಹಯೋಗದಲ್ಲಿ ನಡೆಯುವ ಈ ಶಿಬಿರದಲ್ಲಿ ಸ್ತ್ರೀರೋಗ ತಪಾಸಣೆ, ಬಂಜೆತನ ತಪಾಸಣೆ, ಮುಟ್ಟಿನ ಅಸ್ವಸ್ಥತೆಗಳು, ಮೂತ್ರನಾಳದ ಸೋಂಕು ತಪಾಸಣೆ, ಸ್ತನದ ತಪಾಸಣೆ, ಗರ್ಭಾಶಯದ ತಪಾಸಣೆ, ಮಹಿಳೆಯರ ಕ್ಯಾನ್ಸರ್ ಮುಂತಾದ ತಪಾಸಣೆಗಳನ್ನು ಉಚಿತವಾಗಿ ಮಾಡಲಾಗುವುದು.

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರುಗಳಾದ ಡಾ. ಸ್ವರ್ಣಲತಾ, ಡಾ. ಪ್ರಿಯಾಂಕ ಜಯದೇವ್, ಡಾ. ಅನ್ವಿತಾ ಶತಾನಂ ಪ್ರಸಾದ್ ರಾವ್ ಹಾಗೂ ಸಂತಾನೋತ್ಪತ್ತಿ ಔಷಧ ಕನ್ಸಲ್ಟೆಂಟ್ ಆಗಿರುವ ಡಾ. ಪ್ರಮೋದ ಲಕ್ಷ್ಮಣ್ ಈ ಶಿಬಿರದಲ್ಲಿ ಮಹಿಳೆಯರ ರೋಗ ಮತ್ತು ಬಂಜೆತನ ತಪಾಸಣೆ ನಡೆಸಲಿದ್ದಾರೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯುವ ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತ, ಸ್ಕ್ಯಾನಿಂಗ್ 50%, ಔಷಧದಲ್ಲಿ 10%, ಒಳರೋಗಿ ವಿಭಾಗದಲ್ಲಿ 10%, ರಕ್ತಪರೀಕ್ಷೆ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರರ ಮನೆಯ ಮೇಲ್ಚಾವಣಿ ಕುಸಿತ :ದುರಸ್ತಿಯ ವೆಚ್ಚ ಭರಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!