27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

ವೇಣೂರು: ಶ್ರೀ ವಿಶ್ವಕರ್ಮ ಸೇವಾ ಸಂಘ ವೇಣೂರು ಹಾಗೂ ಕಾಳಿಕಾಂಬ ಮಹಿಳಾ ಮಂಡಳಿ ವೇಣೂರು ಇದರ 33 ನೇ ವರ್ಷದ ಮಹಾ ಸಭೆ ಹಾಗೂ ವಿಶ್ವಕರ್ಮ ಪೂಜೆಯು ಎ.27 ರಂದು ಜರಗಿತು.

ವಾರ್ಷಿಕ ಸಭಾ ಕಾರ್ಯಕ್ರಮದಲ್ಲಿ ಮೂಡುಬಿದ್ರಿ ಶ್ರೀ ಗುರುಮಠ ಕಾಳಿಕಾಂಬ ದೇವಸ್ಥಾನ ಆಡಳಿತ ಮುಖ್ಯಸ್ಥ ಎಂ.ಕೆ ಬಾಲಕೃಷ್ಣ ಆಚಾರ್ಯ ಉಳಿಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿ ವೇಣೂರಿನ ಸಮಸ್ತ ವಿಶ್ವಕರ್ಮ ಬಂಧುಗಳ ಪರಿಶ್ರಮಕ್ಕೆ ಇನ್ನು ಮುಂದೆ ಈ ಕಟ್ಟಡವು ಆದಷ್ಟು ಬೇಗ ಸಭಾಂಗಣವಾಗಿ ನಿರ್ಮಾಣವಾಗಲಿ ಎಂದು ಶುಭ ಹಾರೈಸಿದರು.

ಸದಾನಂದ ಆಚಾರ್ಯ ಯಕ್ಷ ತೀರ್ಥ ಕಲಾ ಸೇವೆ ನೂರಾಳ್ ಬೆಟ್ಟು ಇವರು ಮುಖ್ಯ ಅತಿಥಿಗಳಾಗಿ ಮಾತನಾಡಿ ನಮ್ಮ ಸಮಾಜದ ಬಂಧುಗಳು ಆಚಾರ ಹಾಗೂ ವಿಚಾರಗಳಲ್ಲಿ ನಮ್ಮ ಸಮಾಜದ ಘನತೆ ಗೌರವವನ್ನು ಉಳಿಸಿದರೆ ನಾವು ನಂಬಿದ ದೇವರು ನಮ್ಮನ್ನು ಕೈ ಬಿಡುವುದಿಲ್ಲ ಎಂದು ಸಲಹೆ ನೀಡಿದರು. ಹಾಗೆಯೇ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಕೈರೋಳಿ ಸತೀಶ್ ಆಚಾರ್ಯರವರು ಆಯ್ಕೆಯಾದರು. ಅಭ್ಯಾಗತರನ್ನು ಸಭೆಯ ಗೌರವ ಅಧ್ಯಕ್ಷ ಖಂಡಿಗ ಶ್ರೀಧರ ಆಚಾರ್ಯರವರು ಹಾಗೂ ಅಧ್ಯಕ್ಷ ರವೀಂದ್ರ ಆಚಾರ್ಯರವರು ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಸಂಘದ ಉಪಾಧ್ಯಕ್ಷ ಸೀತಾರಾಮ ಆಚಾರ್ಯ ಸ್ವಾಗತಿಸಿ ಪ್ರಸ್ತಾವನೆ ಗೈದರು. ಜೊತೆ ಕಾರ್ಯದರ್ಶಿ ಬಿ ಹರಿಶ್ಚಂದ್ರ ಆಚಾರ್ಯ ಲೆಕ್ಕಪತ್ರ ಮಂಡಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ನೂತನ ಅಧ್ಯಕ್ಷ ಸತೀಶ್ ಆಚಾರ್ಯಧನ್ಯವಾದವಿತ್ತರು.

Related posts

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!