September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

ವೇಣೂರು: ಶ್ರೀ ವಿಶ್ವಕರ್ಮ ಸೇವಾ ಸಂಘ ವೇಣೂರು ಹಾಗೂ ಕಾಳಿಕಾಂಬ ಮಹಿಳಾ ಮಂಡಳಿ ವೇಣೂರು ಇದರ 33 ನೇ ವರ್ಷದ ಮಹಾ ಸಭೆ ಹಾಗೂ ವಿಶ್ವಕರ್ಮ ಪೂಜೆಯು ಎ.27 ರಂದು ಜರಗಿತು.

ವಾರ್ಷಿಕ ಸಭಾ ಕಾರ್ಯಕ್ರಮದಲ್ಲಿ ಮೂಡುಬಿದ್ರಿ ಶ್ರೀ ಗುರುಮಠ ಕಾಳಿಕಾಂಬ ದೇವಸ್ಥಾನ ಆಡಳಿತ ಮುಖ್ಯಸ್ಥ ಎಂ.ಕೆ ಬಾಲಕೃಷ್ಣ ಆಚಾರ್ಯ ಉಳಿಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿ ವೇಣೂರಿನ ಸಮಸ್ತ ವಿಶ್ವಕರ್ಮ ಬಂಧುಗಳ ಪರಿಶ್ರಮಕ್ಕೆ ಇನ್ನು ಮುಂದೆ ಈ ಕಟ್ಟಡವು ಆದಷ್ಟು ಬೇಗ ಸಭಾಂಗಣವಾಗಿ ನಿರ್ಮಾಣವಾಗಲಿ ಎಂದು ಶುಭ ಹಾರೈಸಿದರು.

ಸದಾನಂದ ಆಚಾರ್ಯ ಯಕ್ಷ ತೀರ್ಥ ಕಲಾ ಸೇವೆ ನೂರಾಳ್ ಬೆಟ್ಟು ಇವರು ಮುಖ್ಯ ಅತಿಥಿಗಳಾಗಿ ಮಾತನಾಡಿ ನಮ್ಮ ಸಮಾಜದ ಬಂಧುಗಳು ಆಚಾರ ಹಾಗೂ ವಿಚಾರಗಳಲ್ಲಿ ನಮ್ಮ ಸಮಾಜದ ಘನತೆ ಗೌರವವನ್ನು ಉಳಿಸಿದರೆ ನಾವು ನಂಬಿದ ದೇವರು ನಮ್ಮನ್ನು ಕೈ ಬಿಡುವುದಿಲ್ಲ ಎಂದು ಸಲಹೆ ನೀಡಿದರು. ಹಾಗೆಯೇ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಕೈರೋಳಿ ಸತೀಶ್ ಆಚಾರ್ಯರವರು ಆಯ್ಕೆಯಾದರು. ಅಭ್ಯಾಗತರನ್ನು ಸಭೆಯ ಗೌರವ ಅಧ್ಯಕ್ಷ ಖಂಡಿಗ ಶ್ರೀಧರ ಆಚಾರ್ಯರವರು ಹಾಗೂ ಅಧ್ಯಕ್ಷ ರವೀಂದ್ರ ಆಚಾರ್ಯರವರು ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಸಂಘದ ಉಪಾಧ್ಯಕ್ಷ ಸೀತಾರಾಮ ಆಚಾರ್ಯ ಸ್ವಾಗತಿಸಿ ಪ್ರಸ್ತಾವನೆ ಗೈದರು. ಜೊತೆ ಕಾರ್ಯದರ್ಶಿ ಬಿ ಹರಿಶ್ಚಂದ್ರ ಆಚಾರ್ಯ ಲೆಕ್ಕಪತ್ರ ಮಂಡಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ನೂತನ ಅಧ್ಯಕ್ಷ ಸತೀಶ್ ಆಚಾರ್ಯಧನ್ಯವಾದವಿತ್ತರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!