25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ



ಶಿಶಿಲ : ಹನುಮಂತ ಸ್ವಾಮಿ ಭಕ್ತಿಗೆ ಆದರ್ಶ. ಆತ ಅತೀ ಧೈರ್ಯವಂತ. ಯಾವುದೇ ಕಾರ್ಯ ಸಾಧಿಸಬೇಕಾದಲ್ಲಿ ಅದನ್ನು ಸಾಧಿಸುವಂತ ಪರಾಕ್ರಮಿ. ಶ್ರೀರಾಮನ ಸೇವಕ. ದುಷ್ಟ ಶಕ್ತಿಗಳನ್ನು ನಿಗ್ರಹಿಸಿದ ವೀರ ಪುರುಷ. ಆತನ ಆರಾಧನೆ ಪರಿಣಾಮ ನಮಗೂ ರಾಷ್ಟ್ರಕ್ಕೂ ಶಕ್ತಿ ತುಂಬಲಿ ಎಂದು ಶ್ರೀ ಅರಿಕೆಗುಡ್ದೆ ವನದುರ್ಗಾ ದೇವಾಲಯ ಅಧ್ಯಕ್ಷ ಪ್ರಕಾಶ‌ ಪಿಲಿಕಬೆ ತಿಳಿಸಿದ್ದರು.

ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ ನಡೆದ ಶ್ರೀ ಆಂಜನೇಯ ಜಯಂತಿ ಕಾರ್ಯಕಾರ್ಯಕ್ರಮ ಉದ್ಘಾಟನೆ ಮಾಡಿ ಶುಭ ಹಾರೈಸಿದರು.


ಮುಖ್ಯ ಅತಿಥಿಯಾಗಿ ಜೀವ ವಿಮಾ ಬೆಳ್ತಂಗಡಿ ಅಧಿಕಾರಿ ಉದಯಶಂಕರ ಅರಸಿನಮಕ್ಕಿ ಮಾತನಾಡಿ ಹನುಮನ ಶಕ್ತಿ ಎಲ್ಲಾ ಭಾರತೀಯ ಪ್ರಜೆಗೂ ಬರಲಿ. ಅವರ ಆದರ್ಶ ಮೈಗೂಡಿಸಿಕೊಂಡು ಬರುವಾ ಎಂದು ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಕಾಸರಗೋಡು ಹಿರಿಯ ಭಜನಾ ಪಟು ಹರಿದಾಸ ಜಯಾನಂದ ಕಾಸರಗೋಡು ‌ಮತ್ತು ಭಜನಾ ಸಾಧಕ ಬಾಲಕೃಷ್ಣ ಪಂಜ ಅವರನ್ನು ಮನೆಯ ಪರವಾಗಿ ಜಯರಾಮ ನೆಲ್ಲಿತ್ತಾಯ ಮತ್ತು ಶ್ರೀ ಮತಿ ರೇಖಾ ಜಯರಾಮ ನೆಲ್ಲಿತ್ತಾಯ ಅಭಿನಂದನೆ ‌ಮಾಡಿದರು.


ರಾಘವೇಂದ್ರ ಕಿಗ್ಗ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಭಜನಾ ಮಂಡಳಿಯ ಭಜಕರು ಭಾಗವಹಿಸಿ ಆಕರ್ಷಕ ಕುಣಿತ ಭಜನೆ ನೆರವೇರಿಸಿದರು.
ಬಿಳಿನೆಲೆ ಭಜನಾ‌ ಮಂಡಳಿಯ ಸುಂದರ ಮತ್ತು ತಂಡದವರಿಂದ ಮತ್ತು ಹರಿದಾಸ ಕಾಸರಗೋಡು ಜಯಾನಂದ ಅವರ ತಂಡ ಭಜನಾ ಕಾರ್ಯಕ್ರಮ ನಡೆಸಿದ್ದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ , ಪುತ್ತೂರು, ಕಾಸರಗೋಡು ವಿವಿಧ ಭಜನಾ ತಂಡದವರು ಭಾಗವಹಿಸಿದ್ದರು.
ಭಾಗವಹಿಸಿದ ಎಲ್ಲರಿಗೂ ಶಿವಕೀರ್ತಿ ನಿಲಯದ ಜಯರಾಮ ನೆಲ್ಲಿತ್ತಾಯ ದಂಪತಿಗಳು ಮನೆಯವರೂ ಎಲ್ಲರೂ ಅಭಿನಂದನೆ ತಿಳಿಸಿದ್ದರು.

Related posts

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಪ.ಪೂ. ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಇಂದುಮತಿ ಮತ್ತು ಪಂಚಮಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya
error: Content is protected !!