22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ



ಶಿಶಿಲ : ಹನುಮಂತ ಸ್ವಾಮಿ ಭಕ್ತಿಗೆ ಆದರ್ಶ. ಆತ ಅತೀ ಧೈರ್ಯವಂತ. ಯಾವುದೇ ಕಾರ್ಯ ಸಾಧಿಸಬೇಕಾದಲ್ಲಿ ಅದನ್ನು ಸಾಧಿಸುವಂತ ಪರಾಕ್ರಮಿ. ಶ್ರೀರಾಮನ ಸೇವಕ. ದುಷ್ಟ ಶಕ್ತಿಗಳನ್ನು ನಿಗ್ರಹಿಸಿದ ವೀರ ಪುರುಷ. ಆತನ ಆರಾಧನೆ ಪರಿಣಾಮ ನಮಗೂ ರಾಷ್ಟ್ರಕ್ಕೂ ಶಕ್ತಿ ತುಂಬಲಿ ಎಂದು ಶ್ರೀ ಅರಿಕೆಗುಡ್ದೆ ವನದುರ್ಗಾ ದೇವಾಲಯ ಅಧ್ಯಕ್ಷ ಪ್ರಕಾಶ‌ ಪಿಲಿಕಬೆ ತಿಳಿಸಿದ್ದರು.

ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ ನಡೆದ ಶ್ರೀ ಆಂಜನೇಯ ಜಯಂತಿ ಕಾರ್ಯಕಾರ್ಯಕ್ರಮ ಉದ್ಘಾಟನೆ ಮಾಡಿ ಶುಭ ಹಾರೈಸಿದರು.


ಮುಖ್ಯ ಅತಿಥಿಯಾಗಿ ಜೀವ ವಿಮಾ ಬೆಳ್ತಂಗಡಿ ಅಧಿಕಾರಿ ಉದಯಶಂಕರ ಅರಸಿನಮಕ್ಕಿ ಮಾತನಾಡಿ ಹನುಮನ ಶಕ್ತಿ ಎಲ್ಲಾ ಭಾರತೀಯ ಪ್ರಜೆಗೂ ಬರಲಿ. ಅವರ ಆದರ್ಶ ಮೈಗೂಡಿಸಿಕೊಂಡು ಬರುವಾ ಎಂದು ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಕಾಸರಗೋಡು ಹಿರಿಯ ಭಜನಾ ಪಟು ಹರಿದಾಸ ಜಯಾನಂದ ಕಾಸರಗೋಡು ‌ಮತ್ತು ಭಜನಾ ಸಾಧಕ ಬಾಲಕೃಷ್ಣ ಪಂಜ ಅವರನ್ನು ಮನೆಯ ಪರವಾಗಿ ಜಯರಾಮ ನೆಲ್ಲಿತ್ತಾಯ ಮತ್ತು ಶ್ರೀ ಮತಿ ರೇಖಾ ಜಯರಾಮ ನೆಲ್ಲಿತ್ತಾಯ ಅಭಿನಂದನೆ ‌ಮಾಡಿದರು.


ರಾಘವೇಂದ್ರ ಕಿಗ್ಗ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಭಜನಾ ಮಂಡಳಿಯ ಭಜಕರು ಭಾಗವಹಿಸಿ ಆಕರ್ಷಕ ಕುಣಿತ ಭಜನೆ ನೆರವೇರಿಸಿದರು.
ಬಿಳಿನೆಲೆ ಭಜನಾ‌ ಮಂಡಳಿಯ ಸುಂದರ ಮತ್ತು ತಂಡದವರಿಂದ ಮತ್ತು ಹರಿದಾಸ ಕಾಸರಗೋಡು ಜಯಾನಂದ ಅವರ ತಂಡ ಭಜನಾ ಕಾರ್ಯಕ್ರಮ ನಡೆಸಿದ್ದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ , ಪುತ್ತೂರು, ಕಾಸರಗೋಡು ವಿವಿಧ ಭಜನಾ ತಂಡದವರು ಭಾಗವಹಿಸಿದ್ದರು.
ಭಾಗವಹಿಸಿದ ಎಲ್ಲರಿಗೂ ಶಿವಕೀರ್ತಿ ನಿಲಯದ ಜಯರಾಮ ನೆಲ್ಲಿತ್ತಾಯ ದಂಪತಿಗಳು ಮನೆಯವರೂ ಎಲ್ಲರೂ ಅಭಿನಂದನೆ ತಿಳಿಸಿದ್ದರು.

Related posts

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya
error: Content is protected !!