24.2 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

ಬೈಂದೂರು : ಸಮೃದ್ಧ ಬೈಂದೂರು ಪರಿಕಲ್ಪನೆಯ ಸೇವಾ ಸೇತು ಯೋಜನೆಯಡಿಯಲ್ಲಿ ಸೇವಾಭಾರತಿ (ರಿ.)ಕನ್ಯಾಡಿ ಸಹಯೋಗದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನೂತನ ಪುನಶ್ಚೇತನ ಕೇಂದ್ರ ಸೇವಾಧಾಮ ಇದರ ಭೂಮಿ ಪೂಜೆ ಕಾರ್ಯಕ್ರಮ ಏಪ್ರಿಲ್ 28 ರಂದು ಬೈಂದೂರಿನ ಪಡುವರಿ ಗ್ರಾಮದ ಹೇನಬೇರು ಇಲ್ಲಿ ನಡೆಯಿತು.

ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೂಮಿ ಪೂಜೆಯನ್ನು ನೆರವೇರಿಸಿ ಈ ಒಂದು ಕೇಂದ್ರ ಬೈಂದೂರಿನ 37 ಮಂದಿ ದಿವ್ಯಾಂಗರ ಬಾಳಲ್ಲಿ ಆಶಾಕಿರಣವಾಗಲಿ. ರಾಜಕೀಯದ ಜೊತೆ ಜೊತೆಗೆ ಇನ್ನೊಬ್ಬರ ನೋವಿಗೆ ನಾವು ಸ್ಪಂದಿಸುವುದು ಸಹ ಮಹತ್ತರವಾದ ಕೆಲಸವಾಗಿದೆ . ಬೈಂದೂರಿನಲ್ಲಿ ಆಗುವಂತಹ ಈ ಒತ್ತಡ ಗಾಯ ನಿರ್ವಹಣೆ ಮತ್ತು ಪುನಶ್ವೇತನ ಕೇಂದ್ರವನ್ನು ಕರ್ನಾಟಕದಲ್ಲಿ 2ನೇ ಕೇಂದ್ರವನ್ನಾಗಿ ಪ್ರಾರಂಭಿಸಲಿದ್ದೇವೆ ಈ ಒಂದು ಕೆಲಸವನ್ನು ಮಾಡಲು ಬಹಳ ಸಂತೋಷ ಇದೆ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಮೃದ್ಧ ಜನ ಸೇವಾ ಚಾರಿಟೇಬಲ್ ಟ್ರಸ್ಟ್ ನ ಪ್ರಮುಖರಾದ ಬಿಎಸ್ ಸುರೇಶ್ ಶೆಟ್ಟಿ, ಬರವಾಡಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಸುರೇಶ್, ಶಿರೂರು ಹಿರಿಯ ವೈದ್ಯಾಧಿಕಾರಿಗಳು ಡಾ. ಕೆ ಪಿ ನಬಿಯಾರ್, ಬೈಂದೂರು ಆರೋಗ್ಯ ಭಾರತಿ ಉಪಾಧ್ಯಕ್ಷರು ಡಾ. ಎ ಎಸ್ ಉಡುಪ ಸೇವಾಧಾಮ ಸಂಸ್ಥಾಪಕರು ಕೆ ವಿನಾಯಕ ರಾವ್ ಮತ್ತು ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!