23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

ಬೈಂದೂರು : ಸಮೃದ್ಧ ಬೈಂದೂರು ಪರಿಕಲ್ಪನೆಯ ಸೇವಾ ಸೇತು ಯೋಜನೆಯಡಿಯಲ್ಲಿ ಸೇವಾಭಾರತಿ (ರಿ.)ಕನ್ಯಾಡಿ ಸಹಯೋಗದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನೂತನ ಪುನಶ್ಚೇತನ ಕೇಂದ್ರ ಸೇವಾಧಾಮ ಇದರ ಭೂಮಿ ಪೂಜೆ ಕಾರ್ಯಕ್ರಮ ಏಪ್ರಿಲ್ 28 ರಂದು ಬೈಂದೂರಿನ ಪಡುವರಿ ಗ್ರಾಮದ ಹೇನಬೇರು ಇಲ್ಲಿ ನಡೆಯಿತು.

ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೂಮಿ ಪೂಜೆಯನ್ನು ನೆರವೇರಿಸಿ ಈ ಒಂದು ಕೇಂದ್ರ ಬೈಂದೂರಿನ 37 ಮಂದಿ ದಿವ್ಯಾಂಗರ ಬಾಳಲ್ಲಿ ಆಶಾಕಿರಣವಾಗಲಿ. ರಾಜಕೀಯದ ಜೊತೆ ಜೊತೆಗೆ ಇನ್ನೊಬ್ಬರ ನೋವಿಗೆ ನಾವು ಸ್ಪಂದಿಸುವುದು ಸಹ ಮಹತ್ತರವಾದ ಕೆಲಸವಾಗಿದೆ . ಬೈಂದೂರಿನಲ್ಲಿ ಆಗುವಂತಹ ಈ ಒತ್ತಡ ಗಾಯ ನಿರ್ವಹಣೆ ಮತ್ತು ಪುನಶ್ವೇತನ ಕೇಂದ್ರವನ್ನು ಕರ್ನಾಟಕದಲ್ಲಿ 2ನೇ ಕೇಂದ್ರವನ್ನಾಗಿ ಪ್ರಾರಂಭಿಸಲಿದ್ದೇವೆ ಈ ಒಂದು ಕೆಲಸವನ್ನು ಮಾಡಲು ಬಹಳ ಸಂತೋಷ ಇದೆ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಮೃದ್ಧ ಜನ ಸೇವಾ ಚಾರಿಟೇಬಲ್ ಟ್ರಸ್ಟ್ ನ ಪ್ರಮುಖರಾದ ಬಿಎಸ್ ಸುರೇಶ್ ಶೆಟ್ಟಿ, ಬರವಾಡಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಸುರೇಶ್, ಶಿರೂರು ಹಿರಿಯ ವೈದ್ಯಾಧಿಕಾರಿಗಳು ಡಾ. ಕೆ ಪಿ ನಬಿಯಾರ್, ಬೈಂದೂರು ಆರೋಗ್ಯ ಭಾರತಿ ಉಪಾಧ್ಯಕ್ಷರು ಡಾ. ಎ ಎಸ್ ಉಡುಪ ಸೇವಾಧಾಮ ಸಂಸ್ಥಾಪಕರು ಕೆ ವಿನಾಯಕ ರಾವ್ ಮತ್ತು ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya
error: Content is protected !!