27.4 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

ಬೈಂದೂರು : ಸಮೃದ್ಧ ಬೈಂದೂರು ಪರಿಕಲ್ಪನೆಯ ಸೇವಾ ಸೇತು ಯೋಜನೆಯಡಿಯಲ್ಲಿ ಸೇವಾಭಾರತಿ (ರಿ.)ಕನ್ಯಾಡಿ ಸಹಯೋಗದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನೂತನ ಪುನಶ್ಚೇತನ ಕೇಂದ್ರ ಸೇವಾಧಾಮ ಇದರ ಭೂಮಿ ಪೂಜೆ ಕಾರ್ಯಕ್ರಮ ಏಪ್ರಿಲ್ 28 ರಂದು ಬೈಂದೂರಿನ ಪಡುವರಿ ಗ್ರಾಮದ ಹೇನಬೇರು ಇಲ್ಲಿ ನಡೆಯಿತು.

ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೂಮಿ ಪೂಜೆಯನ್ನು ನೆರವೇರಿಸಿ ಈ ಒಂದು ಕೇಂದ್ರ ಬೈಂದೂರಿನ 37 ಮಂದಿ ದಿವ್ಯಾಂಗರ ಬಾಳಲ್ಲಿ ಆಶಾಕಿರಣವಾಗಲಿ. ರಾಜಕೀಯದ ಜೊತೆ ಜೊತೆಗೆ ಇನ್ನೊಬ್ಬರ ನೋವಿಗೆ ನಾವು ಸ್ಪಂದಿಸುವುದು ಸಹ ಮಹತ್ತರವಾದ ಕೆಲಸವಾಗಿದೆ . ಬೈಂದೂರಿನಲ್ಲಿ ಆಗುವಂತಹ ಈ ಒತ್ತಡ ಗಾಯ ನಿರ್ವಹಣೆ ಮತ್ತು ಪುನಶ್ವೇತನ ಕೇಂದ್ರವನ್ನು ಕರ್ನಾಟಕದಲ್ಲಿ 2ನೇ ಕೇಂದ್ರವನ್ನಾಗಿ ಪ್ರಾರಂಭಿಸಲಿದ್ದೇವೆ ಈ ಒಂದು ಕೆಲಸವನ್ನು ಮಾಡಲು ಬಹಳ ಸಂತೋಷ ಇದೆ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಮೃದ್ಧ ಜನ ಸೇವಾ ಚಾರಿಟೇಬಲ್ ಟ್ರಸ್ಟ್ ನ ಪ್ರಮುಖರಾದ ಬಿಎಸ್ ಸುರೇಶ್ ಶೆಟ್ಟಿ, ಬರವಾಡಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಸುರೇಶ್, ಶಿರೂರು ಹಿರಿಯ ವೈದ್ಯಾಧಿಕಾರಿಗಳು ಡಾ. ಕೆ ಪಿ ನಬಿಯಾರ್, ಬೈಂದೂರು ಆರೋಗ್ಯ ಭಾರತಿ ಉಪಾಧ್ಯಕ್ಷರು ಡಾ. ಎ ಎಸ್ ಉಡುಪ ಸೇವಾಧಾಮ ಸಂಸ್ಥಾಪಕರು ಕೆ ವಿನಾಯಕ ರಾವ್ ಮತ್ತು ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya
error: Content is protected !!